ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ: ಮಾಜಿ ಸೈನಿಕನ ಬಂಧನ

Last Updated 20 ಜೂನ್ 2022, 14:21 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಾಜಿ ಸೈನಿಕನನ್ನುಸೋಮವಾರ ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದ ವಿಶ್ವನಾಥ ತಿಮ್ಮಪ್ಪ‌ ಮಾನೆ ಬಂಧಿತ ಆರೋಪಿ.

ಕಲಬುರಗಿಯ ನೊಬೆಲ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿಬ್ಲೂಟೂತ್‌ ಉಪಕರಣ ಬಳಸಿದ್ದ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಈಗಾಗಲೇ ಬಂಧನದಲ್ಲಿರುವ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್.ಡಿ. ಪಾಟೀಲ ಅಕ್ರಮವೆಸಗಲು ನೆರವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ವಿಶ್ವನಾಥ ಮಾನೆ ಮಾಜಿ ಸೈನಿಕರ ಕೋಟಾದಲ್ಲಿ ಪ್ರಥಮ ಸ್ಥಾನದಲ್ಲಿ ಪಿಎಸ್ಐ ಸ್ಪರ್ಧಾತ್ಮಕ ‌ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.

ಹಾಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬಂಧಿಸಿದ್ದ ಸಿಐಡಿ ಇದೇ ಮೊದಲ ಬಾರಿಗೆ ಮಾಜಿ ಸೈನಿಕನನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT