ಕಲಬುರ್ಗಿ– ಶಹಾಬಾದ್ ರಸ್ತೆಯಲ್ಲಿರುವ ಜ್ಯೋತಿ ನಗರದ ಬಳಿ ಶನಿವಾರ ನಸುಕಿನಲ್ಲಿ ಆರೋಪಿಗಳು ದೋರೆಡೆಗೆ ಹೊಂಚು ಹಾಕಿ ಕುಳಿತಿದ್ದರು. ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ಜಂಬೆ, ಬಡಿಗೆ ಹಿಡಿದುಕೊಂಡು ಕಾಯುತ್ತಿದ್ದರು. ಈ ಭಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ಆಯುಕ್ತ ಎನ್.ಸತೀಶಕುಮಾರ, ಡಿಸಿಪಿಗಳಾದ ಕಿಶೋರಬಾಬು, ಶ್ರೀಕಾಂತ ಕಟ್ಟಿಮನಿ, ಸಿ ಉಪ ವಿಭಾಗದ ಎಸಿಪಿ ಜೆ.ಎಚ್.ಇನಾಮದಾರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶಿವಾನಂದ ಗಾಣಿಗೇರ ಮತ್ತು ಸಿಬ್ಬಂದಿ ದಾಳಿ ನಡೆಸಿದರು.