ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಉಚಿತ ಬಸ್ ಪಾಸ್ ವಿತರಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಉನ್ನತೀಕರಣ, ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕದ ಬಗ್ಗೆ ಪ್ರಸ್ತಾಪಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪಾಲಿಗೆ ಇದೊಂದು ನಿರಾಶದಯ ಬಜೆಟ್ ಆಗಿದೆ ಎಂದು ಆರೋಪಿಸಿದರು.