<p>ಕಲಬುರಗಿ: ‘ವೈದ್ಯಕೀಯ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕಲಿತರೆ ಅಪಘಾತದಿಂದ ಸಂಭವಿಸುವ ಸಾವು–ನೋವುಗಳ ಸಂಖ್ಯೆ ತಗ್ಗಿಸಬಹುದು’ ಎಂದು ಪೊಲೀಸ್ ಆಯುಕ್ತ ಡಾ. ವೈ.ಎಸ್.ರವಿಕುಮಾರ್ ಹೇಳಿದರು.</p>.<p>ಇಲ್ಲಿನ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಯುನೈಟೆಡ್ ಆಸ್ಪತ್ರೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವೈದ್ಯಕೀಯ ತುರ್ತು ಪರಿಸ್ಥಿತಿ ನಿಭಾಯಿಸುವ ಬಗ್ಗೆ ವೈದ್ಯರಿಂದ ಜನಸಾಮಾನ್ಯರು ತಿಳಿದುಕೊಳ್ಳವುದು ಅವಶ್ಯವಾಗಿದೆ. ವೈದ್ಯರು ಸಹ ರೋಗಿಗಳಿಗೆ ರಕ್ತಸ್ರಾವ ತಡೆ, ಹಾವು ಕಡಿತ, ದ್ರವಾಂಶದ ಕೊರತೆ, ಪ್ರಜ್ಞೆಹೀನ ಸ್ಥಿತಿ, ಸುಟ್ಟ ಗಾಯಗಳಂತಹ ಪ್ರಾಥಮಿಕ ಚಿಕಿತ್ಸೆಯ ಆರೋಗ್ಯ ತುರ್ತು ಬಗ್ಗೆ ಮಾಹಿತಿ ಕೊಡಬೇಕು’ ಎಂದರು.</p>.<p>‘ಕ್ಯಾನ್ಸರ್ ಪೀಡಿತರು ಹೊರತುಪಡಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಜನರಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸುವ ಜ್ಞಾನ ಬಂದರೆ ಇದರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ತಗ್ಗುತ್ತದೆ‘ ಎಂದರು.</p>.<p>ಆಸ್ಪತ್ರೆಯ ಮುಖ್ಯಸ್ಥ ಡಾ. ವಿಕ್ರಮ್ ಸಿದ್ದಾರೆಡ್ಡಿ ಮಾತನಾಡಿ, ‘ಆಸ್ಪತ್ರೆ ವತಿಯಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ನಿಭಾಯಿಸುವ ಕೌಶಲದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮಾತನಾಡಿ, ‘ಅಪಘಾತದಿಂದ ದಾಖಲಾದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತಿದೆ’ ಎಂದರು.</p>.<p>ಡಿಸಿಪಿ ಅಡ್ಡೂರು ಶ್ರೀನಿವಾಸಲು, ಎಸಿಪಿ ದೀಪೆನ್ ಎಂ.ಎನ್. ಇದ್ದರು. ಇದೇ ವೇಳೆ ಜನರಿಗೆ ಯುನೈಟೆಡ್ ಆಸ್ಪತ್ರೆ ವತಿಯಿಂದ ಉಚಿತವಾಗಿ ಪ್ರಥಮ ಚಿಕಿತ್ಸಾ ಕಿಟ್ಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ವೈದ್ಯಕೀಯ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕಲಿತರೆ ಅಪಘಾತದಿಂದ ಸಂಭವಿಸುವ ಸಾವು–ನೋವುಗಳ ಸಂಖ್ಯೆ ತಗ್ಗಿಸಬಹುದು’ ಎಂದು ಪೊಲೀಸ್ ಆಯುಕ್ತ ಡಾ. ವೈ.ಎಸ್.ರವಿಕುಮಾರ್ ಹೇಳಿದರು.</p>.<p>ಇಲ್ಲಿನ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಯುನೈಟೆಡ್ ಆಸ್ಪತ್ರೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವೈದ್ಯಕೀಯ ತುರ್ತು ಪರಿಸ್ಥಿತಿ ನಿಭಾಯಿಸುವ ಬಗ್ಗೆ ವೈದ್ಯರಿಂದ ಜನಸಾಮಾನ್ಯರು ತಿಳಿದುಕೊಳ್ಳವುದು ಅವಶ್ಯವಾಗಿದೆ. ವೈದ್ಯರು ಸಹ ರೋಗಿಗಳಿಗೆ ರಕ್ತಸ್ರಾವ ತಡೆ, ಹಾವು ಕಡಿತ, ದ್ರವಾಂಶದ ಕೊರತೆ, ಪ್ರಜ್ಞೆಹೀನ ಸ್ಥಿತಿ, ಸುಟ್ಟ ಗಾಯಗಳಂತಹ ಪ್ರಾಥಮಿಕ ಚಿಕಿತ್ಸೆಯ ಆರೋಗ್ಯ ತುರ್ತು ಬಗ್ಗೆ ಮಾಹಿತಿ ಕೊಡಬೇಕು’ ಎಂದರು.</p>.<p>‘ಕ್ಯಾನ್ಸರ್ ಪೀಡಿತರು ಹೊರತುಪಡಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಜನರಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸುವ ಜ್ಞಾನ ಬಂದರೆ ಇದರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ತಗ್ಗುತ್ತದೆ‘ ಎಂದರು.</p>.<p>ಆಸ್ಪತ್ರೆಯ ಮುಖ್ಯಸ್ಥ ಡಾ. ವಿಕ್ರಮ್ ಸಿದ್ದಾರೆಡ್ಡಿ ಮಾತನಾಡಿ, ‘ಆಸ್ಪತ್ರೆ ವತಿಯಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ನಿಭಾಯಿಸುವ ಕೌಶಲದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮಾತನಾಡಿ, ‘ಅಪಘಾತದಿಂದ ದಾಖಲಾದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತಿದೆ’ ಎಂದರು.</p>.<p>ಡಿಸಿಪಿ ಅಡ್ಡೂರು ಶ್ರೀನಿವಾಸಲು, ಎಸಿಪಿ ದೀಪೆನ್ ಎಂ.ಎನ್. ಇದ್ದರು. ಇದೇ ವೇಳೆ ಜನರಿಗೆ ಯುನೈಟೆಡ್ ಆಸ್ಪತ್ರೆ ವತಿಯಿಂದ ಉಚಿತವಾಗಿ ಪ್ರಥಮ ಚಿಕಿತ್ಸಾ ಕಿಟ್ಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>