ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ‘ದತ್ತಾತ್ರೇಯ ಕ್ಷೇತ್ರದ ಅಭಿವೃದ್ಧಿಗೆಂದು ಕೇಳಲಾದ ಒಂದೇ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಣ ಬಿಡುಗಡೆ ಮಾಡಿದ್ದಾರೆ. ಈ ಅನುದಾನದಲ್ಲಿ ಒಳಚರಂಡಿ ಸುಧಾರಣೆ ಜತೆಗೆ ಚರಂಡಿ ನೀರು ನೇರವಾಗಿ ನದಿಗೆ ಸೇರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗುವುದು. ಪ್ರವಾಹ ಬಂದಾಗ ನದಿ ನೀರು ದತ್ತಾತ್ರೇಯ ದೇವಾಲಯಕ್ಕೆ ಬರದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.