ಕಲಬುರ್ಗಿ: ₹ 3 ಸಾವಿರ ಕೋಟಿ ವೆಚ್ಚದಲ್ಲಿ ಕಲಬುರ್ಗಿ, ಬೀದರ್ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಂಬರುವ ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ ಅನುಭವ ಮಂಟಪ ಕಾರ್ಯಾರಂಭ ಮಾಡಲಾಗುವುದು. ಕಲಬುರ್ಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ ಸಂಬಂಧ ಕೇಂದ್ರದೊಂದಿಗೆ ವ್ಯವಹರಿಸಲಾಗುತ್ತದೆ ಎಂದರು.