ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶನಿವಾರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರು ಕರ್ನಾಟಕದಲ್ಲೂ ಇದನ್ನೇ ಮಾಡಿದ್ದಾರೆ. ಬೇರೆ ರಾಜ್ಯದಲ್ಲಿಯೂ ಇದನ್ನೇ ಮಾಡಿದ್ದಾರೆ. ಈಗ ಮಹಾರಾಷ್ಟ್ರದಲ್ಲಿಯೂ ಸರ್ಕಾರ ಬುಡಮೇಲು ಮಾಡುವ ಯತ್ನ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ ಎಂದರು.