<p><strong>ಚಿಂಚೋಳಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಶುಕ್ರವಾರ ನಸುಕಿನಲ್ಲಿ 7 ಬಾರಿ ಭೂಮಿಯಿಂದ ವಿಚಿತ್ರವಾದ ಸ್ಫೋಟಕ ಸದ್ದು ಕೇಳಿಸಿದರೆ ಒಮ್ಮೆ ಲಘು ಕಂಪನವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಬೆಳಿಗ್ಗೆ 3.24ಕ್ಕೆ ಭೂಮಿ ಅಲುಗಾಡಿದ ಅನುಭವವಾಗಿದೆ ಇದರ ಬೆನ್ನಲ್ಲಿಯೇ ಅರ್ಧ ಗಂಟೆ ಸಮಯದಲ್ಲಿಯೇ 7 ಬಾರಿ ಭೂಮಿಯಿಂದ ಸದ್ದು ಕೇಳಿಬಂದಿದೆ ಎಂದು ಗ್ರಾ.ಪಂ ಮಾಜಿ ಸದಸ್ಯ ವೀರೇಶ ಬೆಳಕೇರಿ ಮುಖಂಡರಾದ ಸಿದ್ದು ಹಲಚೇರಾ ಮತ್ತು ಮಂಗಳಮೂರ್ತಿ ಪ್ರಜಾವಾಣಿಗೆ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/news/article/2017/09/13/519584.html" target="_blank">ಗಡಿಕೇಶ್ವಾರ: ಭೂಮಿಯಿಂದ ವಿಚಿತ್ರ ಸದ್ದು ಭಯಭೀತ ಜನ </a></p>.<p>ಭೂಮಿಯಿಂದ ಪದೇ ಪದೇ ಸದ್ದು ಕೇಳಿ ಬರುತ್ತಿರುವುದರಿಂದ ಬೆಚ್ಚಿಬಿದ್ದ ಜನ ಬೆಳಿಗ್ಗೆ 3.30ರಿಂದ ಮನೆಗಳಿಂದ ಹೊರ ಬಂದು ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ರಾತ್ರಿ ಕಳೆದಿದ್ದಾರೆ.</p>.<p>ಮಲ್ಲಿಕಾರ್ಜುನ ಮಂದಿರ, ಹನುಮಾನ ಮಂದಿರ, ಗ್ರಾ.ಪಂ ಕಚೇರಿ ಮೊದಲಾದ ಕಡೆ ಜನ ಜಮಾಯಿಸಿದ್ದರು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಶುಕ್ರವಾರ ನಸುಕಿನಲ್ಲಿ 7 ಬಾರಿ ಭೂಮಿಯಿಂದ ವಿಚಿತ್ರವಾದ ಸ್ಫೋಟಕ ಸದ್ದು ಕೇಳಿಸಿದರೆ ಒಮ್ಮೆ ಲಘು ಕಂಪನವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಬೆಳಿಗ್ಗೆ 3.24ಕ್ಕೆ ಭೂಮಿ ಅಲುಗಾಡಿದ ಅನುಭವವಾಗಿದೆ ಇದರ ಬೆನ್ನಲ್ಲಿಯೇ ಅರ್ಧ ಗಂಟೆ ಸಮಯದಲ್ಲಿಯೇ 7 ಬಾರಿ ಭೂಮಿಯಿಂದ ಸದ್ದು ಕೇಳಿಬಂದಿದೆ ಎಂದು ಗ್ರಾ.ಪಂ ಮಾಜಿ ಸದಸ್ಯ ವೀರೇಶ ಬೆಳಕೇರಿ ಮುಖಂಡರಾದ ಸಿದ್ದು ಹಲಚೇರಾ ಮತ್ತು ಮಂಗಳಮೂರ್ತಿ ಪ್ರಜಾವಾಣಿಗೆ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/news/article/2017/09/13/519584.html" target="_blank">ಗಡಿಕೇಶ್ವಾರ: ಭೂಮಿಯಿಂದ ವಿಚಿತ್ರ ಸದ್ದು ಭಯಭೀತ ಜನ </a></p>.<p>ಭೂಮಿಯಿಂದ ಪದೇ ಪದೇ ಸದ್ದು ಕೇಳಿ ಬರುತ್ತಿರುವುದರಿಂದ ಬೆಚ್ಚಿಬಿದ್ದ ಜನ ಬೆಳಿಗ್ಗೆ 3.30ರಿಂದ ಮನೆಗಳಿಂದ ಹೊರ ಬಂದು ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ರಾತ್ರಿ ಕಳೆದಿದ್ದಾರೆ.</p>.<p>ಮಲ್ಲಿಕಾರ್ಜುನ ಮಂದಿರ, ಹನುಮಾನ ಮಂದಿರ, ಗ್ರಾ.ಪಂ ಕಚೇರಿ ಮೊದಲಾದ ಕಡೆ ಜನ ಜಮಾಯಿಸಿದ್ದರು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>