<p><strong>ಕಲಬುರಗಿ:</strong> ಗಣೇಶ ಚತುರ್ಥಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಮತ್ತು ಕಲಬುರಗಿ ನಡುವೆ ಸೆಪ್ಟೆಂಬರ್ 5, 6 ಮತ್ತು 7ರಂದು ಒನ್ ಟ್ರಿಪ್ (ಒಂದು ಬಾರಿ) ವಿಶೇಷ ರೈಲು ಸಂಚರಿಸಲಿದೆ.</p>.<p>06589 ಸಂಖ್ಯೆಯ ರೈಲು ಸೆ. 5, 6 ಹಾಗೂ 7ರಂದು ಎಸ್ಎಂವಿಟಿಯಿಂದ ಹೊರಟು ಸೆ.6, 7 ಮತ್ತು 8ರಂದು ಬೆಳಿಗ್ಗೆ 7.40ಕ್ಕೆ ಕಲಬುರಗಿ ನಿಲ್ದಾಣ ತಲುಪಲಿದೆ. 06590 ಸಂಖ್ಯೆಯ ರೈಲು ಸೆ.6, 7 ಹಾಗೂ 8ರಂದು ಬೆಳಿಗ್ಗೆ 9.35ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನಗಳ ರಾತ್ರಿ 8ಕ್ಕೆ ಎಸ್ಎಂವಿಟಿ ನಿಲ್ದಾಣ ತಲುಪಲಿದೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ನೈಋತ್ಯ ರೈಲ್ವೆ ತಿಳಿಸಿದೆ.</p>.<p>ಈ ವಿಶೇಷ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಯಾದಗಿರಿ ಹಾಗೂ ಶಹಾಬಾದ್ನಲ್ಲಿ ನಿಲುಗಡೆಯಾಗಲಿದೆ.</p>.<p>ಮುಂಗಡ ಬುಕ್ಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ <a href="https://www.enquiry.indianrail.gov.in">www.enquiry.indianrail.gov.in </a>ಜಾಲತಾಣಕ್ಕೆ ಭೇಟಿ ನೀಡಬಹುದು. ಅಥವಾ 139ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಗಣೇಶ ಚತುರ್ಥಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಮತ್ತು ಕಲಬುರಗಿ ನಡುವೆ ಸೆಪ್ಟೆಂಬರ್ 5, 6 ಮತ್ತು 7ರಂದು ಒನ್ ಟ್ರಿಪ್ (ಒಂದು ಬಾರಿ) ವಿಶೇಷ ರೈಲು ಸಂಚರಿಸಲಿದೆ.</p>.<p>06589 ಸಂಖ್ಯೆಯ ರೈಲು ಸೆ. 5, 6 ಹಾಗೂ 7ರಂದು ಎಸ್ಎಂವಿಟಿಯಿಂದ ಹೊರಟು ಸೆ.6, 7 ಮತ್ತು 8ರಂದು ಬೆಳಿಗ್ಗೆ 7.40ಕ್ಕೆ ಕಲಬುರಗಿ ನಿಲ್ದಾಣ ತಲುಪಲಿದೆ. 06590 ಸಂಖ್ಯೆಯ ರೈಲು ಸೆ.6, 7 ಹಾಗೂ 8ರಂದು ಬೆಳಿಗ್ಗೆ 9.35ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನಗಳ ರಾತ್ರಿ 8ಕ್ಕೆ ಎಸ್ಎಂವಿಟಿ ನಿಲ್ದಾಣ ತಲುಪಲಿದೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ನೈಋತ್ಯ ರೈಲ್ವೆ ತಿಳಿಸಿದೆ.</p>.<p>ಈ ವಿಶೇಷ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಯಾದಗಿರಿ ಹಾಗೂ ಶಹಾಬಾದ್ನಲ್ಲಿ ನಿಲುಗಡೆಯಾಗಲಿದೆ.</p>.<p>ಮುಂಗಡ ಬುಕ್ಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ <a href="https://www.enquiry.indianrail.gov.in">www.enquiry.indianrail.gov.in </a>ಜಾಲತಾಣಕ್ಕೆ ಭೇಟಿ ನೀಡಬಹುದು. ಅಥವಾ 139ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>