ಕಲಬುರ್ಗಿ: ಗಣೇಶೋತ್ಸವ ಅಂಗವಾಗಿ ಶರಣಬಸವೇಶ್ವರ ಪಬ್ಲಿಕ್ ಶಾಲೆಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶರಣಬಸವಪ್ಪ ಅಪ್ಪ ಅವರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ನೆರವೇರಿಸಿದರು.
ಇದೇ ಮೊದಲ ಬಾರಿಗೆ ಶಾಲೆಗೆ ಬರುವ ಮೂಲಕ ಕುಮಾರ ದೊಡ್ಡಪ್ಪ ಅಪ್ಪ ಸಾರ್ವಜನಿಕವಾಗಿ ದರ್ಶನ ನೀಡಿದರು.
ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ ಅವರು, ದಾಸೋಹ ಮಹಾಮನೆಯ ದಾಕ್ಷಾಯಿಣಿ ಅವ್ವ ಅವರ ದಾಸೋಹವನ್ನು ಸ್ಮರಿಸಿದರು. ಅಪ್ಪ ಅವರು ಶರಣಬಸವೇಶ್ವರ ಸಂಸ್ಥೆಯನ್ನು ಬೆಳೆಸಿದ ರೀತಿಯನ್ನು ಕೊಂಡಾಡಿದರು.
ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ, ಅವರ ಪತ್ನಿ ನಂದಿನಿ ನಿಷ್ಠಿ, ಶರಣಬಸವೇಶ್ವರ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಎನ್.ಎಸ್. ದೇವರಕಲ್, ಅಪ್ಪ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಶಂಕರಗೌಡ ಹೊಸಮನಿ, ವಿಜ್ಞಾನ ಶಿಕ್ಷಕ ಪ್ರಸಾದ್ ಜಿ.ಕೆ. ಇದ್ದರು.