<p><strong>ಕಲಬುರ್ಗಿ: </strong>ಗಣೇಶೋತ್ಸವ ಅಂಗವಾಗಿ ಶರಣಬಸವೇಶ್ವರ ಪಬ್ಲಿಕ್ ಶಾಲೆಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶರಣಬಸವಪ್ಪ ಅಪ್ಪ ಅವರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ನೆರವೇರಿಸಿದರು.</p>.<p>ಇದೇ ಮೊದಲ ಬಾರಿಗೆ ಶಾಲೆಗೆ ಬರುವ ಮೂಲಕ ಕುಮಾರ ದೊಡ್ಡಪ್ಪ ಅಪ್ಪ ಸಾರ್ವಜನಿಕವಾಗಿ ದರ್ಶನ ನೀಡಿದರು.</p>.<p>ಶರಣಬಸವಪ್ಪ ಅಪ್ಪ ಮಾತನಾಡಿ, ‘ಕುಮಾರ ದೊಡ್ಡಪ್ಪ ಅಪ್ಪ ಸಾಕ್ಷಾತ್ ದೊಡ್ಡಪ್ಪ ಅಪ್ಪನವರ ಪ್ರತಿರೂಪವೇ ಮೈವೆತ್ತಂತಿದ್ದಾನೆ’ ಎಂದು ನುಡಿದರು.</p>.<p>ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ ಅವರು, ದಾಸೋಹ ಮಹಾಮನೆಯ ದಾಕ್ಷಾಯಿಣಿ ಅವ್ವ ಅವರ ದಾಸೋಹವನ್ನು ಸ್ಮರಿಸಿದರು. ಅಪ್ಪ ಅವರು ಶರಣಬಸವೇಶ್ವರ ಸಂಸ್ಥೆಯನ್ನು ಬೆಳೆಸಿದ ರೀತಿಯನ್ನು ಕೊಂಡಾಡಿದರು.</p>.<p>ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ, ಅವರ ಪತ್ನಿ ನಂದಿನಿ ನಿಷ್ಠಿ, ಶರಣಬಸವೇಶ್ವರ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಎನ್.ಎಸ್. ದೇವರಕಲ್, ಅಪ್ಪ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಶಂಕರಗೌಡ ಹೊಸಮನಿ, ವಿಜ್ಞಾನ ಶಿಕ್ಷಕ ಪ್ರಸಾದ್ ಜಿ.ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಗಣೇಶೋತ್ಸವ ಅಂಗವಾಗಿ ಶರಣಬಸವೇಶ್ವರ ಪಬ್ಲಿಕ್ ಶಾಲೆಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶರಣಬಸವಪ್ಪ ಅಪ್ಪ ಅವರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ನೆರವೇರಿಸಿದರು.</p>.<p>ಇದೇ ಮೊದಲ ಬಾರಿಗೆ ಶಾಲೆಗೆ ಬರುವ ಮೂಲಕ ಕುಮಾರ ದೊಡ್ಡಪ್ಪ ಅಪ್ಪ ಸಾರ್ವಜನಿಕವಾಗಿ ದರ್ಶನ ನೀಡಿದರು.</p>.<p>ಶರಣಬಸವಪ್ಪ ಅಪ್ಪ ಮಾತನಾಡಿ, ‘ಕುಮಾರ ದೊಡ್ಡಪ್ಪ ಅಪ್ಪ ಸಾಕ್ಷಾತ್ ದೊಡ್ಡಪ್ಪ ಅಪ್ಪನವರ ಪ್ರತಿರೂಪವೇ ಮೈವೆತ್ತಂತಿದ್ದಾನೆ’ ಎಂದು ನುಡಿದರು.</p>.<p>ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ ಅವರು, ದಾಸೋಹ ಮಹಾಮನೆಯ ದಾಕ್ಷಾಯಿಣಿ ಅವ್ವ ಅವರ ದಾಸೋಹವನ್ನು ಸ್ಮರಿಸಿದರು. ಅಪ್ಪ ಅವರು ಶರಣಬಸವೇಶ್ವರ ಸಂಸ್ಥೆಯನ್ನು ಬೆಳೆಸಿದ ರೀತಿಯನ್ನು ಕೊಂಡಾಡಿದರು.</p>.<p>ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ, ಅವರ ಪತ್ನಿ ನಂದಿನಿ ನಿಷ್ಠಿ, ಶರಣಬಸವೇಶ್ವರ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಎನ್.ಎಸ್. ದೇವರಕಲ್, ಅಪ್ಪ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಶಂಕರಗೌಡ ಹೊಸಮನಿ, ವಿಜ್ಞಾನ ಶಿಕ್ಷಕ ಪ್ರಸಾದ್ ಜಿ.ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>