ಆರೋಪಿಗಳಾದ ದೌಲಪ್ಪ ಶಂಕರ ಕುಂಬಾರ ಹಾಗೂ ಆತನ ಮಗ ಶಿವಲಿಂಗಪ್ಪ ಇಬ್ಬರೂ ದ್ವಿಚಕ್ರ ವಾಹನದ ಮೇಲೆ ಗೋಣಿಚೀಲದಲ್ಲಿ ಗಾಂಜಾ ಸಾಗಾಟ ಮಾಡಿ ಗಡಿ ಗ್ರಾಮಗಳಲ್ಲಿ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ನಿಂಬರ್ಗಾ ಪಿಎಸ್ಐ ಸುವರ್ಣಾ ಮಲಶೆಟ್ಟಿ, ಅಪರಾಧ ವಿಭಾಗದ ಪಿಎಸ್ಐ ಬಸವರಾಜ ಅವರು ಡಿವೈಎಸ್ಪಿ ಮಲ್ಲಿಕಾರ್ಜುನ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಗಾಂಜಾ ಸಮೇತ ವಶಕ್ಕೆ ಪಡೆದಿದ್ದಾರೆ.