ಕಲಬುರಗಿ: ನಗರದ ಬಿದ್ದಾಪುರ ಕಾಲೊನಿಯ ರಾಘವೇಂದ್ರ ಸ್ವಾಮಿ ಮಠ, ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶುಕ್ರವಾರ ಗೀತಾ ಜಯಂತಿ ಆಚರಿಸಲಾಯಿತು.
ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಆದೇಶದಂತೆ ಭಗವದ್ಗೀತೆಯ 10ನೇ ಅಧ್ಯಾಯ ಸಮರ್ಪಣೆಯೂ ನಡೆಯಿತು.
ಈ ಸಂದರ್ಭದಲ್ಲಿ ಶಾರದಾ ಶಂಕರ ಭಜನಾ ಮಂಡಳಿ, ಉಮಾ ಮಹೇಶ್ವರ ಸ್ತೋತ್ರ ಮಂಡಳಿ, ವಾಗ್ದೇವಿ ಭಜನಾ ಮಂಡಳಿ, ಮಹಾಲಕ್ಷ್ಮಿ ಭಜನಾ ಮಂಡಳಿ ಸದಸ್ಯೆಯರು ಸೇರಿದಂತೆ ಹಲವು ಮಹಿಳೆಯರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಭಗವದ್ಗೀತಾ ಅಭಿಯಾನದ ಸಂಚಾಲಕ ಚಂದ್ರಕಾಂತ ಕುಲಕರ್ಣಿ ನಾಗೂರ ಸೇರಿದಂತೆ ಹಲವರು ಇದ್ದರು.