ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೀತಾ ಜಯಂತಿ ಆಚರಣೆ

Published 23 ಡಿಸೆಂಬರ್ 2023, 14:51 IST
Last Updated 23 ಡಿಸೆಂಬರ್ 2023, 14:51 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಬಿದ್ದಾಪುರ ಕಾಲೊನಿಯ ರಾಘವೇಂದ್ರ ಸ್ವಾಮಿ ಮಠ, ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶುಕ್ರವಾರ ಗೀತಾ ಜಯಂತಿ ಆಚರಿಸಲಾಯಿತು.

ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಆದೇಶದಂತೆ ಭಗವದ್ಗೀತೆಯ 10ನೇ ಅಧ್ಯಾಯ ಸಮರ್ಪಣೆಯೂ ನಡೆಯಿತು.

ಈ ಸಂದರ್ಭದಲ್ಲಿ ಶಾರದಾ ಶಂಕರ ಭಜನಾ ಮಂಡಳಿ, ಉಮಾ ಮಹೇಶ್ವರ ಸ್ತೋತ್ರ ಮಂಡಳಿ, ವಾಗ್ದೇವಿ ಭಜನಾ ಮಂಡಳಿ, ಮಹಾಲಕ್ಷ್ಮಿ ಭಜನಾ ಮಂಡಳಿ ಸದಸ್ಯೆಯರು ಸೇರಿದಂತೆ ಹಲವು ಮಹಿಳೆಯರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಭಗವದ್ಗೀತಾ ಅಭಿಯಾನದ ಸಂಚಾಲಕ ಚಂದ್ರಕಾಂತ ಕುಲಕರ್ಣಿ ನಾಗೂರ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT