<p><strong>ಕಲಬುರಗಿ:</strong> ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ, ಮಾರ್ಕ್ಸ್ವಾದಿ ಚಿಂತಕ ಹಾಗೂ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವದಾಸ ಘೋಷ್ ಅವರ 49ನೇ ಸ್ಮರಣ ವಾರ್ಷಿಕೋತ್ಸವ ಸಮಾರಂಭವನ್ನು ನಗರದ ಪಕ್ಷದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು.</p>.<p>ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಸಮಿತಿ ಸದಸ್ಯ ವಿ.ಎನ್. ರಾಜಶೇಖರ, ‘ಶಿವದಾಸ ಘೋಷ್ ಅವರು ಎಳೆಯ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಜೀರಹಿತ ಪಂಥದ ಹೋರಾಟಗಾರರಾಗಿದ್ದರು. ಅವರು ಜೈಲಿನಲ್ಲಿದ್ದಾಗಲೇ ನಮಗೆ ದೊರಕುವ ಈ ರಾಜಕೀಯ ಸ್ವಾತಂತ್ರ್ಯವು ಕೇವಲ ಈ ದೇಶದ ಉಳ್ಳವರಿಗೆ ದೊರಕುತ್ತದೆ. ಆದರೆ ಈ ದೇಶದ ಸಂಪತ್ತನ್ನು ತಮ್ಮ ಬೆವರು-ರಕ್ತ ಸುರಿಸಿ ಸೃಷ್ಟಿಸುವ ಕಾರ್ಮಿಕರು-ರೈತರು ಹಾಗೂ ದುಡಿಯುವ ಜನರಿಗಲ್ಲ ಎಂಬುದನ್ನು ಮನಗಂಡರು. ಭಾರತದಲ್ಲಿ ಮಾರ್ಕ್ಸ್ವಾದಕ್ಕೆ ಅತ್ಯಮೂಲ್ಯ ಕೊಡುಗೆಗಳನ್ನು ನೀಡಿದರು’ ಎಂದರು. </p>.<p>ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡರಾದ ವಿ. ನಾಗಮ್ಮಾಳ್, ಎಸ್. ಎಂ. ಶರ್ಮಾ, ಮಹೇಶ ನಾಡಗೌಡ, ಡಾ. ಸೀಮಾ ದೇಶಪಾಂಡೆ, ಈಶ್ವರ, ರಾಧಾ, ತುಳಜಾರಾಮ ಮತ್ತಿತರರು ಇದ್ದರು. ಪಕ್ಷದ ಸ್ಥಳೀಯ ಸಮಿತಿಯ ಸದಸ್ಯ ಹಣಮಂತ ಎಸ್. ಎಚ್. ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ, ಮಾರ್ಕ್ಸ್ವಾದಿ ಚಿಂತಕ ಹಾಗೂ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವದಾಸ ಘೋಷ್ ಅವರ 49ನೇ ಸ್ಮರಣ ವಾರ್ಷಿಕೋತ್ಸವ ಸಮಾರಂಭವನ್ನು ನಗರದ ಪಕ್ಷದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು.</p>.<p>ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಸಮಿತಿ ಸದಸ್ಯ ವಿ.ಎನ್. ರಾಜಶೇಖರ, ‘ಶಿವದಾಸ ಘೋಷ್ ಅವರು ಎಳೆಯ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಜೀರಹಿತ ಪಂಥದ ಹೋರಾಟಗಾರರಾಗಿದ್ದರು. ಅವರು ಜೈಲಿನಲ್ಲಿದ್ದಾಗಲೇ ನಮಗೆ ದೊರಕುವ ಈ ರಾಜಕೀಯ ಸ್ವಾತಂತ್ರ್ಯವು ಕೇವಲ ಈ ದೇಶದ ಉಳ್ಳವರಿಗೆ ದೊರಕುತ್ತದೆ. ಆದರೆ ಈ ದೇಶದ ಸಂಪತ್ತನ್ನು ತಮ್ಮ ಬೆವರು-ರಕ್ತ ಸುರಿಸಿ ಸೃಷ್ಟಿಸುವ ಕಾರ್ಮಿಕರು-ರೈತರು ಹಾಗೂ ದುಡಿಯುವ ಜನರಿಗಲ್ಲ ಎಂಬುದನ್ನು ಮನಗಂಡರು. ಭಾರತದಲ್ಲಿ ಮಾರ್ಕ್ಸ್ವಾದಕ್ಕೆ ಅತ್ಯಮೂಲ್ಯ ಕೊಡುಗೆಗಳನ್ನು ನೀಡಿದರು’ ಎಂದರು. </p>.<p>ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡರಾದ ವಿ. ನಾಗಮ್ಮಾಳ್, ಎಸ್. ಎಂ. ಶರ್ಮಾ, ಮಹೇಶ ನಾಡಗೌಡ, ಡಾ. ಸೀಮಾ ದೇಶಪಾಂಡೆ, ಈಶ್ವರ, ರಾಧಾ, ತುಳಜಾರಾಮ ಮತ್ತಿತರರು ಇದ್ದರು. ಪಕ್ಷದ ಸ್ಥಳೀಯ ಸಮಿತಿಯ ಸದಸ್ಯ ಹಣಮಂತ ಎಸ್. ಎಚ್. ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>