<p><strong>ಕಲಬುರಗಿ: </strong>ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಉಂಟಾಗಿದ್ದರಿಂದ ಪಿ.ಎಂ. ಕೇರ್ಸ್ ನಿಧಿಯಲ್ಲಿ ಮಂಜೂರಾಗಿದ್ದ ಆಮ್ಲಜನಕ ಘಟಕಗಳನ್ನು ಇಲ್ಲಿನ ಜಿಮ್ಸ್ ಆವರಣದಲ್ಲಿ ಗುರುವಾರ ವಸತಿ ಸಚಿವ ವಿ.ಸೋಮಣ್ಣ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಸೇವೆಗೆ ಸಮರ್ಪಿಸಿದರು.</p>.<p>ಪಿ.ಎಂ. ಕೇರ್ಸ್ ನಿಧಿಯಿಂದ ಆರಂಭಿಸಲಾದ ಒಂದು ಸಾವಿರ ಎಲ್ಪಿಎಂ ಮತ್ತು ಎಲ್ ಅಂಡ್ ಟಿ ಕಂಪನಿಯ ಸಿಎಸ್ಆರ್ ನಿಧಿಯಲ್ಲಿ 500 ಎಲ್ಪಿಎಂ ಸಾಮರ್ಥ್ಯದ ಘಟಕಗಳ ಗುಂಡಿಯನ್ನು ಒತ್ತುವ ಮೂಲಕ ಸಚಿವದ್ವಯರು ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ‘ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉಂಟಾದ ಆಮ್ಲಜನಕದ ಕೊರತೆಯನ್ನು ಗಮನದಲ್ಲಿ ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಸ್ಪತ್ರೆಗಳಲ್ಲಿ ಉತ್ಪಾದನಾ ಘಟಕಗಳ ಸ್ಥಾಪನೆ ಮಾಡಿದೆ. ಈ ಘಟಕಗಳು ಕೇವಲ ಕೊರೊನಾ ಪೀಡಿತರಿಗೆ ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ವೈದ್ಯಕೀಯ ಆಕ್ಸಿಜನ್ ಅಗತ್ಯವಾದ ಸಾಮಾನ್ಯ ರೋಗಿಗಳಿಗೂ ಉಪಯೋಗವಾಗಲಿದೆ’ ಎಂದರು.</p>.<p>ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ ಮಾತನಾಡಿ, ‘ಆಮ್ಲಜನಕ ಉತ್ಪಾದನಾ ಘಟಕಗಳ ಆರಂಭದಿಂದ ರೋಗಿಗಳಿಗೆ ಪೂರೈಸಲು ಮತ್ತಷ್ಟು ಸಹಕಾರಿಯಾಗಲಿದೆ. ಆಸ್ಪತ್ರೆಯ ಆವರಣದಲ್ಲೇ ಆಮ್ಲಜನಕ ಉತ್ಪಾದನೆಯಾಗುವುದರಿಂದ ಅಭಾವದ ಭೀತಿ ಇರುವುದಿಲ್ಲ’ ಎಂದು ಹೇಳಿದರು.</p>.<p>ಪಿ.ಎಂ. ಕೇರ್ಸ್ ಅಡಿ ಒಂದು ಸಾವಿರ ಎಲ್ಪಿಎಂ ಆಕ್ಸಿಜನ್ ಉತ್ಪಾದನಾ ಘಟಕದ ಯಂತ್ರಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಪೂರೈಸಿದೆ. ಸಿವಿಲ್ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದೆ ಎಂದು ಮಾಹಿತಿ ನೀಡಿದರು.</p>.<p>ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಫಿಯೋದ್ಧಿನ್, ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಉಂಟಾಗಿದ್ದರಿಂದ ಪಿ.ಎಂ. ಕೇರ್ಸ್ ನಿಧಿಯಲ್ಲಿ ಮಂಜೂರಾಗಿದ್ದ ಆಮ್ಲಜನಕ ಘಟಕಗಳನ್ನು ಇಲ್ಲಿನ ಜಿಮ್ಸ್ ಆವರಣದಲ್ಲಿ ಗುರುವಾರ ವಸತಿ ಸಚಿವ ವಿ.ಸೋಮಣ್ಣ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಸೇವೆಗೆ ಸಮರ್ಪಿಸಿದರು.</p>.<p>ಪಿ.ಎಂ. ಕೇರ್ಸ್ ನಿಧಿಯಿಂದ ಆರಂಭಿಸಲಾದ ಒಂದು ಸಾವಿರ ಎಲ್ಪಿಎಂ ಮತ್ತು ಎಲ್ ಅಂಡ್ ಟಿ ಕಂಪನಿಯ ಸಿಎಸ್ಆರ್ ನಿಧಿಯಲ್ಲಿ 500 ಎಲ್ಪಿಎಂ ಸಾಮರ್ಥ್ಯದ ಘಟಕಗಳ ಗುಂಡಿಯನ್ನು ಒತ್ತುವ ಮೂಲಕ ಸಚಿವದ್ವಯರು ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ‘ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉಂಟಾದ ಆಮ್ಲಜನಕದ ಕೊರತೆಯನ್ನು ಗಮನದಲ್ಲಿ ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಸ್ಪತ್ರೆಗಳಲ್ಲಿ ಉತ್ಪಾದನಾ ಘಟಕಗಳ ಸ್ಥಾಪನೆ ಮಾಡಿದೆ. ಈ ಘಟಕಗಳು ಕೇವಲ ಕೊರೊನಾ ಪೀಡಿತರಿಗೆ ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ವೈದ್ಯಕೀಯ ಆಕ್ಸಿಜನ್ ಅಗತ್ಯವಾದ ಸಾಮಾನ್ಯ ರೋಗಿಗಳಿಗೂ ಉಪಯೋಗವಾಗಲಿದೆ’ ಎಂದರು.</p>.<p>ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ ಮಾತನಾಡಿ, ‘ಆಮ್ಲಜನಕ ಉತ್ಪಾದನಾ ಘಟಕಗಳ ಆರಂಭದಿಂದ ರೋಗಿಗಳಿಗೆ ಪೂರೈಸಲು ಮತ್ತಷ್ಟು ಸಹಕಾರಿಯಾಗಲಿದೆ. ಆಸ್ಪತ್ರೆಯ ಆವರಣದಲ್ಲೇ ಆಮ್ಲಜನಕ ಉತ್ಪಾದನೆಯಾಗುವುದರಿಂದ ಅಭಾವದ ಭೀತಿ ಇರುವುದಿಲ್ಲ’ ಎಂದು ಹೇಳಿದರು.</p>.<p>ಪಿ.ಎಂ. ಕೇರ್ಸ್ ಅಡಿ ಒಂದು ಸಾವಿರ ಎಲ್ಪಿಎಂ ಆಕ್ಸಿಜನ್ ಉತ್ಪಾದನಾ ಘಟಕದ ಯಂತ್ರಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಪೂರೈಸಿದೆ. ಸಿವಿಲ್ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದೆ ಎಂದು ಮಾಹಿತಿ ನೀಡಿದರು.</p>.<p>ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಫಿಯೋದ್ಧಿನ್, ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>