<p>ಚಿಂಚೋಳಿ: ತಾಲ್ಲೂಕಿನ ದಸ್ತಾಪುರ ಗ್ರಾಮದಲ್ಲಿ ಶನಿವಾರ ಆಟವಾಡುತ್ತಿದ್ದ 11 ವರ್ಷದ ಬಾಲಕಿ ಹೀನಾ ಕೌಸರ್ ಮನೆಯ ಹಿಂದಿನ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ.</p>.<p>ಬಾಲಕಿ ಸಂಜೆಯಾದರೂ ಮನೆಗೆ ಬಾರದಿದ್ದಾಗ ಅವಳನ್ನು ಹುಡುಕಿದ್ದಾರೆ. ಎಲ್ಲಿಯೂ ಕಾಣಿಸದಿದ್ದಾಗ ಅವಳು ಕಾಣೆಯಾಗಿದ್ದಾಳೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅವಳ ಭಾವಚಿತ್ರ ಮತ್ತು ಆಡಿಯೊ ಸಂದೇಶ ಹರಿ ಬಿಡಲಾಗಿತ್ತು.</p>.<p>ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಮಹಾಂತೇಶ, ಸಬ್ ಇನ್ಸ್ಪೆಕ್ಟರ್ ತಿಮ್ಮಯ್ಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮನೆಯ ಹಿಂದಿನ ಬಾವಿಯಲ್ಲಿ ಬಿದ್ದಿರುವ ಶಂಕೆಯಿಂದ ಪೊಲೀಸರು ಅಗ್ನಿಶಾಮಕ ಠಾಣೆಯವರನ್ನು ಕರೆಸಿ ಪರಿಶೀಲಿಸಿದಾಗ ಶವ ದೊರಕಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>4ನೇ ತರಗತಿ ಉತ್ತೀರ್ಣಳಾಗಿ 5ನೇ ತರಗತಿಯ ಪ್ರವೇಶಕ್ಕೆ ಶಾಲೆ ಆರಂಭವಾಗುವುದನ್ನು ಕಾಯುತ್ತಿದ್ದ ಬಾಲಕಿಯು ಬಾವಿಯಲ್ಲಿರುವ ಮೀನುಗಳನ್ನು ನೋಡಲು ಹೋಗಿ ಜಾರಿ ಬಾವಿಗೆ ಬಿದ್ದಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಬಾಲಕಿಯು ಸುಲೇಪೇಟ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ತಾಲ್ಲೂಕಿನ ದಸ್ತಾಪುರ ಗ್ರಾಮದಲ್ಲಿ ಶನಿವಾರ ಆಟವಾಡುತ್ತಿದ್ದ 11 ವರ್ಷದ ಬಾಲಕಿ ಹೀನಾ ಕೌಸರ್ ಮನೆಯ ಹಿಂದಿನ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ.</p>.<p>ಬಾಲಕಿ ಸಂಜೆಯಾದರೂ ಮನೆಗೆ ಬಾರದಿದ್ದಾಗ ಅವಳನ್ನು ಹುಡುಕಿದ್ದಾರೆ. ಎಲ್ಲಿಯೂ ಕಾಣಿಸದಿದ್ದಾಗ ಅವಳು ಕಾಣೆಯಾಗಿದ್ದಾಳೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅವಳ ಭಾವಚಿತ್ರ ಮತ್ತು ಆಡಿಯೊ ಸಂದೇಶ ಹರಿ ಬಿಡಲಾಗಿತ್ತು.</p>.<p>ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಮಹಾಂತೇಶ, ಸಬ್ ಇನ್ಸ್ಪೆಕ್ಟರ್ ತಿಮ್ಮಯ್ಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮನೆಯ ಹಿಂದಿನ ಬಾವಿಯಲ್ಲಿ ಬಿದ್ದಿರುವ ಶಂಕೆಯಿಂದ ಪೊಲೀಸರು ಅಗ್ನಿಶಾಮಕ ಠಾಣೆಯವರನ್ನು ಕರೆಸಿ ಪರಿಶೀಲಿಸಿದಾಗ ಶವ ದೊರಕಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>4ನೇ ತರಗತಿ ಉತ್ತೀರ್ಣಳಾಗಿ 5ನೇ ತರಗತಿಯ ಪ್ರವೇಶಕ್ಕೆ ಶಾಲೆ ಆರಂಭವಾಗುವುದನ್ನು ಕಾಯುತ್ತಿದ್ದ ಬಾಲಕಿಯು ಬಾವಿಯಲ್ಲಿರುವ ಮೀನುಗಳನ್ನು ನೋಡಲು ಹೋಗಿ ಜಾರಿ ಬಾವಿಗೆ ಬಿದ್ದಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಬಾಲಕಿಯು ಸುಲೇಪೇಟ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>