ಕಲಬುರಗಿ: ‘ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಕೋಲಿ ಕಬ್ಬಲಿಗ ಸಮಾಜದ ಅಂಜಲಿ ಅಂಬಿಗೇರ ಅವರನ್ನು ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆಯಾಗಬೇಕು. ಅಂಜಲಿ ಅಂಬಿಗೇರ್ ಪರಿವಾರಕ್ಕೆ ರಾಜ್ಯ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಆಕೆಯ ಕುಟುಂಬದ ಒಬ್ಬರಿಗೆ ಉದ್ಯೋಗ ಕೊಡಬೇಕು‘ ಎಂದು ತೊನಸನಹಳ್ಳಿ ಎಸ್ ಅಲ್ಲಮಪ್ರಭು ಪೀಠದ ಮಲ್ಲಣಪ್ಪ ಸ್ವಾಮೀಜಿ ಆಗ್ರಹಿಸಿದ್ದಾರೆ.