ಕಲಬುರ್ಗಿ | ರೈತರಿಗೆ ಸಾಲ ನೀಡಲು ಆಗ್ರಹ
ಕಲಬುರ್ಗಿ: ‘ಕಲಬುರ್ಗಿ– ಯಾದಗಿರಿ ಜಿಲ್ಲಾ ಸಹಕಾರ ಬ್ಯಾಂಕ್ನಲ್ಲಿ ಸಾಲ ಮನ್ನಾ ಆದ ರೈತರಿಗೆ ಕೂಡಲೇ ಮರು ಸಾಲ ನೀಡಬೇಕು’ ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ ಬಿ. ಮಹಾಗರಗಿ ಆಗ್ರಹಿಸಿದರು.
‘ಈಗಾಗಲೇ ಮುಂಗಾರು ಬಿತ್ತನೆ ಪ್ರಾರಂಭಗೊಂಡಿದ್ದು, ರೈತರಿಗೆ ಬೀಜ, ಗೊಬ್ಬರ ಹಾಗೂ ಇತರೆ ಖರ್ಚುಗಳಿಗೆ ಹಣದ ಬೇಕಿದೆ. ಇಂಥ ವೇಳೆಯಲ್ಲೂ ಸಾಲ ನೀಡದೇ ರೈತರನ್ನು ಸತಾಯಿಸಿದರೆ ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಸಹಕಾರ ಬ್ಯಾಂಕಿನಿಂದ ಪಡೆದ ಸಾಲ ಮನ್ನಾ ಮಾಡಿದ್ದರು. ಮನಾ ಫಲಾನುಭವಿಗಳಿಗೆ ಈಗ ಮರುಸಾಲ ನೀಡುತ್ತಿಲ್ಲ. ಹಣವನ್ನು ಅಪೆಕ್ಸ್ ಬ್ಯಾಂಕ್ ವಸೂಲಿ ಮಾಡಿಕೊಂಡಿದೆ. ಹೀಗಾಗಿ ರೈತರಿಗೆ ಸಾಲ ನೀಡಲು ಬ್ಯಾಂಕಿನಲ್ಲಿ ಹಣ ಇಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ’ ಎಂದೂ ದೂರಿದರು.
ವೇದಿಕೆ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಟ್ಟಣಶೆಟ್ಟಿ, ಪ್ರವೀಣ ಕುಲರ್ಣಿ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.