‘ರಾಘವೇಂದ್ರ ನಾಡಗೌಡ ಹೊರತುಪಡಿಸಿ ಉಳಿದವರು ಬೆಂಗಳೂರು, ಬೆಳಗಾವಿ, ಧಾರವಾಡದವರನ್ನು ನೇಮಕ ಮಾಡಲಾಗಿದೆ. ಅವರು ನಮಗೆ ಸ್ಥಳೀಯವಾಗಿ ಲಭ್ಯವಾಗುವುದಿಲ್ಲ. ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಪ್ರತಿಭಾವಂತರಿದ್ದಾರೆ. ಹಾಗಾಗಿ, ಈ ಭಾಗದವರನ್ನೇ ನೇಮಕ ಮಾಡಬೇಕು. ಇಲ್ಲವಾದಲ್ಲಿ ಈ ಎಲ್ಲ ಜಿಲ್ಲೆಗಳ ವಕೀಲರ ಸಂಘಗಳ ಬೆಂಬಲದೊಂದಿಗೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.