<p><strong>ಕಲಬುರಗಿ:</strong> ‘ಜೀವನದಲ್ಲಿ ಗುರಿ ಮತ್ತು ಗುರು ಎರಡು ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಹಿಡಿದ ಕೆಲಸ ಬಿಡದೆ ಮಾಡುವ ಪ್ರಯತ್ನ ಸಾಧನೆಗೆ ಸಹಕಾರಿಯಾಗುತ್ತದೆ’ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಉಪನಿರ್ದೇಶಕ ಸುರೇಶ ಕೆ.ಅಕ್ಕಣ್ಣ ಹೇಳಿದರು.</p>.<p>ಈಚೆಗೆ ನಡೆದ ನಗರದ ಮಾತೋಶ್ರೀ ಕಲ್ಯಾಣಿ ಸ್ಮಾರಕ ಶಿಕ್ಷಣ ಸಂಸ್ಥೆ ಸಂಚಾಲಿತ ಶ್ರೀಗುರು ಸ್ವತಂತ್ರ ವಿಜ್ಞಾನ ಪದವಿಪೂರ್ವ ಕಾಲೇಜಿನ 2025–26ನೇ ಸಾಲಿನ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಂಶುಪಾಲ ವಿದ್ಯಾಸಾಗರ ಎಂ.ಗೋಗಿ, ‘ವಿದ್ಯಾರ್ಥಿಗಳು ತಂದೆ, ತಾಯಿ, ಗುರು, ಹಿರಿಯರಿಗೆ ಗೌರವ ಕೊಡುವುದರೊಂದಿಗೆ ಪ್ರಾಮಾಣಿಕತೆಯಿಂದ ಮುನ್ನಡೆದು ಉನ್ನತ ಶಿಕ್ಷಣ ಪಡೆದು ಭವ್ಯ ಭಾರತದ ಶಿಲ್ಪಿಗಳಾಗಬೇಕು’ ಎಂದು ಹಾರೈಸಿದರು.</p>.<p>ಕಾರ್ಯದರ್ಶಿ ನಿತಿನ್ ನಾಯ್ಕ ಮಾತನಾಡಿ, ‘ಪಾಲಕರು ಮತ್ತು ಗುರುಗಳಿಂದ ಮಾರ್ಗದರ್ಶನ, ಸಲಹೆ ಪಡೆದು ಉತ್ತಮ ಫಲಿತಾಂಶ ತನ್ನಿ’ ಎಂದು ಹೇಳಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷೆ ನಳಿನಿ ಎ.ನಾಯ್ಕ ಮಾತನಾಡಿ, ‘ನಮ್ಮ ಸಂಸ್ಥೆಯ ಉತ್ತಮ ಶಿಕ್ಷಕರ ಸಲಹೆ ಮತ್ತು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ತನ್ನಿ’ ಎಂದರು.</p>.<p>ಆಡಳಿತಾಧಿಕಾರಿಗಳಾದ ನಹಾ ನಾಯ್ಕ, ಆಡಳಿತ ಮಂಡಳಿ ಸದಸ್ಯರಾದ ಗುರುರಾಜ ಎ.ನಾಯ್ಕ ಸೇರಿಂದತೆ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.</p>.<p>ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಜೀವನದಲ್ಲಿ ಗುರಿ ಮತ್ತು ಗುರು ಎರಡು ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಹಿಡಿದ ಕೆಲಸ ಬಿಡದೆ ಮಾಡುವ ಪ್ರಯತ್ನ ಸಾಧನೆಗೆ ಸಹಕಾರಿಯಾಗುತ್ತದೆ’ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಉಪನಿರ್ದೇಶಕ ಸುರೇಶ ಕೆ.ಅಕ್ಕಣ್ಣ ಹೇಳಿದರು.</p>.<p>ಈಚೆಗೆ ನಡೆದ ನಗರದ ಮಾತೋಶ್ರೀ ಕಲ್ಯಾಣಿ ಸ್ಮಾರಕ ಶಿಕ್ಷಣ ಸಂಸ್ಥೆ ಸಂಚಾಲಿತ ಶ್ರೀಗುರು ಸ್ವತಂತ್ರ ವಿಜ್ಞಾನ ಪದವಿಪೂರ್ವ ಕಾಲೇಜಿನ 2025–26ನೇ ಸಾಲಿನ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಂಶುಪಾಲ ವಿದ್ಯಾಸಾಗರ ಎಂ.ಗೋಗಿ, ‘ವಿದ್ಯಾರ್ಥಿಗಳು ತಂದೆ, ತಾಯಿ, ಗುರು, ಹಿರಿಯರಿಗೆ ಗೌರವ ಕೊಡುವುದರೊಂದಿಗೆ ಪ್ರಾಮಾಣಿಕತೆಯಿಂದ ಮುನ್ನಡೆದು ಉನ್ನತ ಶಿಕ್ಷಣ ಪಡೆದು ಭವ್ಯ ಭಾರತದ ಶಿಲ್ಪಿಗಳಾಗಬೇಕು’ ಎಂದು ಹಾರೈಸಿದರು.</p>.<p>ಕಾರ್ಯದರ್ಶಿ ನಿತಿನ್ ನಾಯ್ಕ ಮಾತನಾಡಿ, ‘ಪಾಲಕರು ಮತ್ತು ಗುರುಗಳಿಂದ ಮಾರ್ಗದರ್ಶನ, ಸಲಹೆ ಪಡೆದು ಉತ್ತಮ ಫಲಿತಾಂಶ ತನ್ನಿ’ ಎಂದು ಹೇಳಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷೆ ನಳಿನಿ ಎ.ನಾಯ್ಕ ಮಾತನಾಡಿ, ‘ನಮ್ಮ ಸಂಸ್ಥೆಯ ಉತ್ತಮ ಶಿಕ್ಷಕರ ಸಲಹೆ ಮತ್ತು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ತನ್ನಿ’ ಎಂದರು.</p>.<p>ಆಡಳಿತಾಧಿಕಾರಿಗಳಾದ ನಹಾ ನಾಯ್ಕ, ಆಡಳಿತ ಮಂಡಳಿ ಸದಸ್ಯರಾದ ಗುರುರಾಜ ಎ.ನಾಯ್ಕ ಸೇರಿಂದತೆ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.</p>.<p>ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>