ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಡಿ. ಪಾಟೀಲ ಅವರಿಗೆ ಸೇರಿದ ಲಾಕರ್ನಲ್ಲಿ ಅರ್ಧ ಕೆಜಿ ಚಿನ್ನ ಇರುವುದು ಪತ್ತೆಯಾಗಿದೆ. ಸಿಐಡಿ ಅಧಿಕಾರಿಗಳು ನಗರದ ಸೂಪರ್ ಮಾರ್ಕೆಟ್ನಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿನ ಲಾಕರ್ ತೆಗೆಸಿ ನೋಡಿದಾಗ, ಚಿನ್ನ ಇಟ್ಟಿರುವುದು ಗೊತ್ತಾಗಿದೆ.