<p><strong>ಕಲಬುರಗಿ</strong>: ನಗರದ ಚಿನ್ನಾಭರಣ ತಯಾರಿಸುವ ಅಂಗಡಿಯಲ್ಲಿ ಜುಲೈ 11ರಂದು ನಡೆದಿದ್ದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಅರ್ಬಾಜ್ ಶೇಖ್ (22) ಹಾಗೂ ಮಹ್ಮದ್ ಸಾಜೀದ್ (25) ಬಂಧಿತರು. ಬಂಧಿತರಿಂದ ದರೋಡೆ ಕೃತ್ಯಕ್ಕೆ ಬಳಸಿದ್ದ ಒಂದು ಲೈಟರ್ ಪಿಸ್ತೂಲ್, ಒಂದು ಮಚ್ಚು ಹಾಗೂ ಕದ್ದಿದ್ದ ಬಂಗಾರ ಮಾರಾಟ ಮಾಡಿದ ₹35 ಸಾವಿರ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಪ್ಪ ಸುಬೇದಾರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಅರುಣಕುಮಾರ, ಹೆಡ್ಕಾನ್ಸ್ಟೆಬಲ್ ವೈಜನಾಥ, ಕಾನ್ಸ್ಟೆಬಲ್ ನೀಲಕಂಠ ಅವರಿದ್ದ ತಂಡವು ಮಹಾರಾಷ್ಟ್ರದ ಮಾನಖುರ್ದ್ ಪ್ರದೇಶದಿಂದ ಇಬ್ಬರೂ ಆರೋಪಿಗಳನ್ನು ಬಂಧಿಸಿದೆ.</p>.<p>‘ಆರೋಪಿ ಅರ್ಬಾಜ್ ವಿರುದ್ಧ ಎರಡು ಮೊಬೈಲ್ ಕಳವು ಪ್ರಕರಣಗಳಿವೆ. ಆರೋಪಿ ಮೊಹ್ಮದ್ ಸಾಜಿದ್ ವಿರುದ್ಧ ಎರಡು ಸಣ್ಣ ಪ್ರಕರಣಗಳಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಿಕ್ ಜ್ಯುವೆಲರ್ಸ್ ಅಂಗಡಿಗೆ ಜುಲೈ 11ರಂದು ಮಧ್ಯಾಹ್ನದ ಹೊತ್ತಿನಲ್ಲಿ ನುಗ್ಗಿದ್ದ ಆರೋಪಿಗಳು ಹರಿತವಾದ ಆಯುಧ ಹಾಗೂ ಆಟಿಕೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣದ ತನಿಖೆಗೆ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಐದು ತಂಡಗಳನ್ನು ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ಚಿನ್ನಾಭರಣ ತಯಾರಿಸುವ ಅಂಗಡಿಯಲ್ಲಿ ಜುಲೈ 11ರಂದು ನಡೆದಿದ್ದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಅರ್ಬಾಜ್ ಶೇಖ್ (22) ಹಾಗೂ ಮಹ್ಮದ್ ಸಾಜೀದ್ (25) ಬಂಧಿತರು. ಬಂಧಿತರಿಂದ ದರೋಡೆ ಕೃತ್ಯಕ್ಕೆ ಬಳಸಿದ್ದ ಒಂದು ಲೈಟರ್ ಪಿಸ್ತೂಲ್, ಒಂದು ಮಚ್ಚು ಹಾಗೂ ಕದ್ದಿದ್ದ ಬಂಗಾರ ಮಾರಾಟ ಮಾಡಿದ ₹35 ಸಾವಿರ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಪ್ಪ ಸುಬೇದಾರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಅರುಣಕುಮಾರ, ಹೆಡ್ಕಾನ್ಸ್ಟೆಬಲ್ ವೈಜನಾಥ, ಕಾನ್ಸ್ಟೆಬಲ್ ನೀಲಕಂಠ ಅವರಿದ್ದ ತಂಡವು ಮಹಾರಾಷ್ಟ್ರದ ಮಾನಖುರ್ದ್ ಪ್ರದೇಶದಿಂದ ಇಬ್ಬರೂ ಆರೋಪಿಗಳನ್ನು ಬಂಧಿಸಿದೆ.</p>.<p>‘ಆರೋಪಿ ಅರ್ಬಾಜ್ ವಿರುದ್ಧ ಎರಡು ಮೊಬೈಲ್ ಕಳವು ಪ್ರಕರಣಗಳಿವೆ. ಆರೋಪಿ ಮೊಹ್ಮದ್ ಸಾಜಿದ್ ವಿರುದ್ಧ ಎರಡು ಸಣ್ಣ ಪ್ರಕರಣಗಳಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಿಕ್ ಜ್ಯುವೆಲರ್ಸ್ ಅಂಗಡಿಗೆ ಜುಲೈ 11ರಂದು ಮಧ್ಯಾಹ್ನದ ಹೊತ್ತಿನಲ್ಲಿ ನುಗ್ಗಿದ್ದ ಆರೋಪಿಗಳು ಹರಿತವಾದ ಆಯುಧ ಹಾಗೂ ಆಟಿಕೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣದ ತನಿಖೆಗೆ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಐದು ತಂಡಗಳನ್ನು ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>