<p><strong>ಕಮಲಾಪುರ:</strong> ಉಪಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಮಗ್ನವಾಗಿರುವ ಬಿಜೆಪಿ ರಾಜ್ಯ ಸರ್ಕಾರವು ಪ್ರವಾಹದಿಂದ ಸಂಕಷ್ಟಕ್ಕೀಡಾದ ಜನರ ಬಗ್ಗೆ ಕಿಂಚಿತ್ತು ಕಾಳಜಿ ತೋರುತ್ತಿಲ್ಲ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ ಆರೋಪಿಸಿದರು.</p>.<p>ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಅವರು, ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನ ತತ್ತರಿಸಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ತುಟಿ ಬಿಚ್ಚಿಲ್ಲ. ಶ್ರೀಚಂದ, ಜವಳಗಾ ಸೇತುವೆಗಳು ಪೂರ್ತಿ ಕೊಚ್ಚಿಕೊಂಡು ಹೋಗಿದ್ದು ಸಂಚಾರ ಸ್ಥಗಿತಗೊಂಡಿದೆ ಎಂದರು.</p>.<p>ಮನೆ ಮತ್ತು ಜಮೀನುಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಸರ್ಕಾರ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕು. ಒಂದು ವೇಳೆ ವಿಳಂಬ ಮಾಡಿದರೆ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, ರೈತರ ಹೊಲಗಳು ಕೊಚ್ಚಿಕೊಂಡು ಹೋಗಿ ಹಾನಿಯಾಗಿದೆ. ಕಂದಾಯ ಅಧಿಕಾರಿಗಳು ಶೀಘ್ರ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು ಎಂದರು.</p>.<p>ಬೆಣ್ಣೆತೊರೆ ಪ್ರವಾಹದಿಂದ ಕುರಿಕೋಟಾ, ನಾಗೂರ ಗ್ರಾಮಗಳಲ್ಲಿ ನೀರು ಹೊಕ್ಕಿದೆ. ಕೂಡಲೇ ಹಕ್ಕು ಪತ್ರ ಒದಗಿಸಬೇಕು. ಹಾನಿಯಾದ ಸೇತುವೆ, ರಸ್ತೆ ದುರಸ್ತಿ ಮಾಡಬೇಕು ಎಂದು ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ ಹಾಗೂ ಪಂಚಾಯತ ರಾಜ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ವಿಜಯಕುಮಾರ ಜಿ.ಆರ್, ಜಿಲ್ಲಾ ಪಂಚಾಯಿತಿ ಸದಸ್ಯ ಶರಣಗೌಡ ಪಾಟೀಲ, ಶರಣಬಸಪ್ಪ ಜಾಗರಗಿ, ಸುಭಾಷ ಕೋರೆ, ಪ್ರಭು ಹೀರಾ, ಸನಿಜಪ್ಪ ಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ:</strong> ಉಪಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಮಗ್ನವಾಗಿರುವ ಬಿಜೆಪಿ ರಾಜ್ಯ ಸರ್ಕಾರವು ಪ್ರವಾಹದಿಂದ ಸಂಕಷ್ಟಕ್ಕೀಡಾದ ಜನರ ಬಗ್ಗೆ ಕಿಂಚಿತ್ತು ಕಾಳಜಿ ತೋರುತ್ತಿಲ್ಲ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ ಆರೋಪಿಸಿದರು.</p>.<p>ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಅವರು, ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನ ತತ್ತರಿಸಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ತುಟಿ ಬಿಚ್ಚಿಲ್ಲ. ಶ್ರೀಚಂದ, ಜವಳಗಾ ಸೇತುವೆಗಳು ಪೂರ್ತಿ ಕೊಚ್ಚಿಕೊಂಡು ಹೋಗಿದ್ದು ಸಂಚಾರ ಸ್ಥಗಿತಗೊಂಡಿದೆ ಎಂದರು.</p>.<p>ಮನೆ ಮತ್ತು ಜಮೀನುಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಸರ್ಕಾರ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕು. ಒಂದು ವೇಳೆ ವಿಳಂಬ ಮಾಡಿದರೆ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, ರೈತರ ಹೊಲಗಳು ಕೊಚ್ಚಿಕೊಂಡು ಹೋಗಿ ಹಾನಿಯಾಗಿದೆ. ಕಂದಾಯ ಅಧಿಕಾರಿಗಳು ಶೀಘ್ರ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು ಎಂದರು.</p>.<p>ಬೆಣ್ಣೆತೊರೆ ಪ್ರವಾಹದಿಂದ ಕುರಿಕೋಟಾ, ನಾಗೂರ ಗ್ರಾಮಗಳಲ್ಲಿ ನೀರು ಹೊಕ್ಕಿದೆ. ಕೂಡಲೇ ಹಕ್ಕು ಪತ್ರ ಒದಗಿಸಬೇಕು. ಹಾನಿಯಾದ ಸೇತುವೆ, ರಸ್ತೆ ದುರಸ್ತಿ ಮಾಡಬೇಕು ಎಂದು ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ ಹಾಗೂ ಪಂಚಾಯತ ರಾಜ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ವಿಜಯಕುಮಾರ ಜಿ.ಆರ್, ಜಿಲ್ಲಾ ಪಂಚಾಯಿತಿ ಸದಸ್ಯ ಶರಣಗೌಡ ಪಾಟೀಲ, ಶರಣಬಸಪ್ಪ ಜಾಗರಗಿ, ಸುಭಾಷ ಕೋರೆ, ಪ್ರಭು ಹೀರಾ, ಸನಿಜಪ್ಪ ಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>