<p><strong>ಕಲಬುರ್ಗಿ: </strong>ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ಗಳ ಅಭಾವ ಉಂಟಾದ ಪ್ರಯುಕ್ತ ಸಂಸದ ಡಾ.ಉಮೇಶ ಜಾಧವ್ ಅವರು ಬೆಂಗಳೂರಿನಲ್ಲಿರುವ ಕೊರೊನಾ ವಾರ್ ರೂಮ್ಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವಿವರಿಸಿದ ಬಳಿಕ 600 ವಯಲ್ಸ್ ರೆಮಿಡಿಸಿವಿರ್ ಇಂಜೆಕ್ಷನ್ ಜಿಲ್ಲೆಗೆ ರವಾನೆಯಾಗಿದೆ.</p>.<p>ಇಂಜೆಕ್ಷನ್ ಇಲ್ಲದಿರುವ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಅವರಿಂದ ಮಾಹಿತಿ ಪಡೆದ ಸಂಸದ ಡಾ. ಜಾಧವ ಕೊರೊನಾ ವಾರ್ ರೂಮ್ನಲ್ಲಿದ್ದ ಉಪ ಔಷಧ ನಿಯಂತ್ರಕ ಕೆಂಪಯ್ಯ ಸುರೇಶ್ ಹಾಗೂ ಆಕ್ಸಿಜನ್ ಪೂರೈಕೆ ಜವಾಬ್ದಾರಿ ಹೊತ್ತಿರುವ ಅಂಬರೀಶ ತುಂಬಗಿ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.</p>.<p>ಜಿಲ್ಲೆಯ 20 ಆಸ್ಪತ್ರೆಗಳಿಗೆ ಬೇಕಾದ 1100 ವಯಲ್ಸ್ ರೆಮಿಡಿಸಿವಿರ್ ಇಂಜೆಕ್ಷನ್ಗಳನ್ನು ಪೂರೈಸುವಂತೆ ಕಲಬುರ್ಗಿಯ ಸಹಾಯಕ ಔಷಧ ನಿಯಂತ್ರಕರು ಏಪ್ರಿಲ್ 20ರಂದು ಬೇಡಿಕೆ ಇಟ್ಟಿದ್ದರೂ ಇನ್ನೂ ತಲುಪಿಲ್ಲ ಎಂಬ ಅಂಶವನ್ನು ಗಮನಕ್ಕೆ ತಂದರು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ತಕ್ಷಣಕ್ಕೆ 600 ಇಂಜೆಕ್ಷನ್ಗಳನ್ನು ಕಳಿಸಿಕೊಟ್ಟರು. ಶುಕ್ರವಾರ ಇವು ಜಿಲ್ಲೆಯನ್ನು ತಲುಪಲಿವೆ ಎಂದು ಜಾಧವ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ಗಳ ಅಭಾವ ಉಂಟಾದ ಪ್ರಯುಕ್ತ ಸಂಸದ ಡಾ.ಉಮೇಶ ಜಾಧವ್ ಅವರು ಬೆಂಗಳೂರಿನಲ್ಲಿರುವ ಕೊರೊನಾ ವಾರ್ ರೂಮ್ಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವಿವರಿಸಿದ ಬಳಿಕ 600 ವಯಲ್ಸ್ ರೆಮಿಡಿಸಿವಿರ್ ಇಂಜೆಕ್ಷನ್ ಜಿಲ್ಲೆಗೆ ರವಾನೆಯಾಗಿದೆ.</p>.<p>ಇಂಜೆಕ್ಷನ್ ಇಲ್ಲದಿರುವ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಅವರಿಂದ ಮಾಹಿತಿ ಪಡೆದ ಸಂಸದ ಡಾ. ಜಾಧವ ಕೊರೊನಾ ವಾರ್ ರೂಮ್ನಲ್ಲಿದ್ದ ಉಪ ಔಷಧ ನಿಯಂತ್ರಕ ಕೆಂಪಯ್ಯ ಸುರೇಶ್ ಹಾಗೂ ಆಕ್ಸಿಜನ್ ಪೂರೈಕೆ ಜವಾಬ್ದಾರಿ ಹೊತ್ತಿರುವ ಅಂಬರೀಶ ತುಂಬಗಿ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.</p>.<p>ಜಿಲ್ಲೆಯ 20 ಆಸ್ಪತ್ರೆಗಳಿಗೆ ಬೇಕಾದ 1100 ವಯಲ್ಸ್ ರೆಮಿಡಿಸಿವಿರ್ ಇಂಜೆಕ್ಷನ್ಗಳನ್ನು ಪೂರೈಸುವಂತೆ ಕಲಬುರ್ಗಿಯ ಸಹಾಯಕ ಔಷಧ ನಿಯಂತ್ರಕರು ಏಪ್ರಿಲ್ 20ರಂದು ಬೇಡಿಕೆ ಇಟ್ಟಿದ್ದರೂ ಇನ್ನೂ ತಲುಪಿಲ್ಲ ಎಂಬ ಅಂಶವನ್ನು ಗಮನಕ್ಕೆ ತಂದರು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ತಕ್ಷಣಕ್ಕೆ 600 ಇಂಜೆಕ್ಷನ್ಗಳನ್ನು ಕಳಿಸಿಕೊಟ್ಟರು. ಶುಕ್ರವಾರ ಇವು ಜಿಲ್ಲೆಯನ್ನು ತಲುಪಲಿವೆ ಎಂದು ಜಾಧವ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>