ಸರ್ಕಾರಿ ನೌಕರರ ಮೇಲೆ ರಾಜ್ಯದಲ್ಲಿ ಇಂಥ ಹಲ್ಲೆ, ಕೊಲೆ ಕೃತ್ಯಗಳು ಪದೇ ಪದೇ ನಡೆಯುತ್ತಲೇ ಇವೆ. ಅದರಲ್ಲೂ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಭೂ ಮಾಪನಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದೇ ಕಠಿಣವಾಗಿದೆ. ಭಯದಲ್ಲೇ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಈ ಪರಿಸ್ಥಿತಿ ಸರಿ ಮಾಡಲು ಸೂಕ್ತ ಕಾನೂನು ರೂಪಿಸಬೇಕು. ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸಬೇಕು ಎಂದೂ ಆಗ್ರಹಿಸಿದರು.