<p><strong>ಕಲಬುರಗಿ</strong>: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಲಬುರಗಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ಇಂಗ್ಲಿಷ್ ಭಾಷಾ ಶಿಕ್ಷಕ ಬಸವರಾಜ ದ್ಯಾಮಾ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಮದಾನೆ ಶುಕ್ರವಾರ ಆದೇಶಿಸಿದ್ದಾರೆ.</p>.<p>ಶಿಕ್ಷಕ ಬಸವರಾಜ ದ್ಯಾಮಾ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಹಾಗೂ ಹಳೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ತನಿಖೆಗೆ ಬಿಇಒ ಶಿವಗುಂಡಪ್ಪ ಸಿದ್ಧಣಗೋಳ ನೇತೃತ್ವದಲ್ಲಿ ಸದಸ್ಯರ ಸಮಿತಿ ರಚಿಸಲಾಗಿತ್ತು. ವಿಚಾರಣಾ ಸಮಿತಿಯು ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದಿತ್ತು. ಜೊತೆಗೆ ಆರೋಪ ಎದುರಿಸುತ್ತಿರುವ ಶಿಕ್ಷಕನಿಗೆ ನೋಟಿಸ್ ಕೊಟ್ಟು ಉತ್ತರ ಪಡೆಯಲಾಗಿತ್ತು.</p>.<p>‘ಶಿಕ್ಷಕ ಬಸವರಾಜ ದ್ಯಾಮಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವ ಮೂಲಕ ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ. ವಿಚಾರಣೆ ಕಾಯ್ದಿರಿಸಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ’ ಎಂದು ಕಲಬುರಗಿ ಡಿಡಿಪಿಐ ಸೂರ್ಯಕಾಂತ ಮದಾನೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಲಬುರಗಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ಇಂಗ್ಲಿಷ್ ಭಾಷಾ ಶಿಕ್ಷಕ ಬಸವರಾಜ ದ್ಯಾಮಾ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಮದಾನೆ ಶುಕ್ರವಾರ ಆದೇಶಿಸಿದ್ದಾರೆ.</p>.<p>ಶಿಕ್ಷಕ ಬಸವರಾಜ ದ್ಯಾಮಾ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಹಾಗೂ ಹಳೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ತನಿಖೆಗೆ ಬಿಇಒ ಶಿವಗುಂಡಪ್ಪ ಸಿದ್ಧಣಗೋಳ ನೇತೃತ್ವದಲ್ಲಿ ಸದಸ್ಯರ ಸಮಿತಿ ರಚಿಸಲಾಗಿತ್ತು. ವಿಚಾರಣಾ ಸಮಿತಿಯು ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದಿತ್ತು. ಜೊತೆಗೆ ಆರೋಪ ಎದುರಿಸುತ್ತಿರುವ ಶಿಕ್ಷಕನಿಗೆ ನೋಟಿಸ್ ಕೊಟ್ಟು ಉತ್ತರ ಪಡೆಯಲಾಗಿತ್ತು.</p>.<p>‘ಶಿಕ್ಷಕ ಬಸವರಾಜ ದ್ಯಾಮಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವ ಮೂಲಕ ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ. ವಿಚಾರಣೆ ಕಾಯ್ದಿರಿಸಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ’ ಎಂದು ಕಲಬುರಗಿ ಡಿಡಿಪಿಐ ಸೂರ್ಯಕಾಂತ ಮದಾನೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>