ಜಾತ್ರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಮಾತ್ರವಲ್ಲದೆ ಕೋಲಾರ, ತುಮಕೂರು, ಬೆಂಗಳೂರು ಮತ್ತು ಆಂಧ್ರ ಸೇರಿದಂತೆ ವಿವಿಧಡೆಯಿಂದ ಭಕ್ತರು ಬರಲಿದ್ದಾರೆ. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಮುಜರಾಯಿ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 200ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲು ನಿರ್ಧರಿಸಲಾಗಿದ್ದು, ಭಕ್ತರಿಗಾಗಿ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಬೆಂಗಳೂರಿನಿಂದ ನಂದಿ ಹಾಗೂ ನಂದಿಬೆಟ್ಟಕ್ಕೆ –ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.