<p><strong>ಕಲಬುರಗಿ</strong>: ಬಸವ ವಸತಿ ಯೋಜನೆಯಡಿ ಫಲಾನುಭವಿಯೊಬ್ಬರ ಮನೆಯ ಜಿಪಿಎಸ್ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು ₹ 3 ಸಾವಿರ ಲಂಚ ಪಡೆಯುತ್ತಿದ್ದ ಜೇವರ್ಗಿ ತಾಲ್ಲೂಕಿನ ಹರನೂರು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಬಾಬುರಾವ ಯಲಗೂರದಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p><p>ಗ್ರಾಮದ ಈರಮ್ಮ ಅಯ್ಯಣ್ಣ ಮಡಿವಾಳ ಎಂಬುವವರಿಗೆ ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಅನುದಾನ ಮಂಜೂರಾಗಿತ್ತು. ಕೊನೆಯ ಕಂತು ₹ 30 ಸಾವಿರ ಬಾಕಿ ಇತ್ತು. ಇದಕ್ಕೆ ಜಿಪಿಎಸ್ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಿಕೊಡುವುದಾಗಿ ಬಿಲ್ ಕಲೆಕ್ಟರ್ ಬಾಬುರಾವ ಹೇಳಿದ್ದ. ಇದಕ್ಕೆ ಪ್ರತಿಯಾಗಿ ₹ 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಕುರಿತು ಈರಮ್ಮ ಅವರು ತಮ್ಮ ಪರಿಚಯದ ನಾಗನಗೌಡ ಮಾಲಿಪಾಟೀಲ ಅವರ ಬಳಿ ಅಳಲು ತೋಡಿಕೊಂಡಿದ್ದರು. ಈ ಕುರಿತು ನಾಗನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p><p>ಜೇವರ್ಗಿ ಪಟ್ಟಣದ ಎಪಿಎಂಸಿ ಬಳಿಯ ನರಿಬೋಳ ಕ್ರಾಸ್ನಲ್ಲಿ ನಾಗನಗೌಡ ಅವರು ಹಣ ನೀಡುವುದಾಗಿ ಈರಮ್ಮ ಬಾಬುರಾವಗೆ ತಿಳಿಸಿದ್ದರು. ಅದರಂತೆ ಲಂಚದ ಹಣವನ್ನು ತಲುಪಿಸುವಷ್ಟರಲ್ಲಿ ದಾಳಿ ಮಾಡಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ನಾನಾಗೌಡ ಪಾಟೀಲ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿತು.</p><p>ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನೂಲ್, ಡಿವೈಎಸ್ಪಿ ಗೀತಾ ಬೇನಾಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಯಾದ ಹಣಮಂತರಾಯ ಹತ್ತಿ, ಮಸೂದ್ ಎಚ್.ಸಿ. ಶರಣಬಸವ, ಮಲ್ಲಿನಾಥ, ಅನಿಲ್, ಕನ್ಹಯ್ಯ ತಿವಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಬಸವ ವಸತಿ ಯೋಜನೆಯಡಿ ಫಲಾನುಭವಿಯೊಬ್ಬರ ಮನೆಯ ಜಿಪಿಎಸ್ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು ₹ 3 ಸಾವಿರ ಲಂಚ ಪಡೆಯುತ್ತಿದ್ದ ಜೇವರ್ಗಿ ತಾಲ್ಲೂಕಿನ ಹರನೂರು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಬಾಬುರಾವ ಯಲಗೂರದಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p><p>ಗ್ರಾಮದ ಈರಮ್ಮ ಅಯ್ಯಣ್ಣ ಮಡಿವಾಳ ಎಂಬುವವರಿಗೆ ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಅನುದಾನ ಮಂಜೂರಾಗಿತ್ತು. ಕೊನೆಯ ಕಂತು ₹ 30 ಸಾವಿರ ಬಾಕಿ ಇತ್ತು. ಇದಕ್ಕೆ ಜಿಪಿಎಸ್ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಿಕೊಡುವುದಾಗಿ ಬಿಲ್ ಕಲೆಕ್ಟರ್ ಬಾಬುರಾವ ಹೇಳಿದ್ದ. ಇದಕ್ಕೆ ಪ್ರತಿಯಾಗಿ ₹ 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಕುರಿತು ಈರಮ್ಮ ಅವರು ತಮ್ಮ ಪರಿಚಯದ ನಾಗನಗೌಡ ಮಾಲಿಪಾಟೀಲ ಅವರ ಬಳಿ ಅಳಲು ತೋಡಿಕೊಂಡಿದ್ದರು. ಈ ಕುರಿತು ನಾಗನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p><p>ಜೇವರ್ಗಿ ಪಟ್ಟಣದ ಎಪಿಎಂಸಿ ಬಳಿಯ ನರಿಬೋಳ ಕ್ರಾಸ್ನಲ್ಲಿ ನಾಗನಗೌಡ ಅವರು ಹಣ ನೀಡುವುದಾಗಿ ಈರಮ್ಮ ಬಾಬುರಾವಗೆ ತಿಳಿಸಿದ್ದರು. ಅದರಂತೆ ಲಂಚದ ಹಣವನ್ನು ತಲುಪಿಸುವಷ್ಟರಲ್ಲಿ ದಾಳಿ ಮಾಡಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ನಾನಾಗೌಡ ಪಾಟೀಲ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿತು.</p><p>ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನೂಲ್, ಡಿವೈಎಸ್ಪಿ ಗೀತಾ ಬೇನಾಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಯಾದ ಹಣಮಂತರಾಯ ಹತ್ತಿ, ಮಸೂದ್ ಎಚ್.ಸಿ. ಶರಣಬಸವ, ಮಲ್ಲಿನಾಥ, ಅನಿಲ್, ಕನ್ಹಯ್ಯ ತಿವಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>