<p><strong>ಯಡ್ರಾಮಿ (ಕಲಬುರ್ಗಿ ಜಿಲ್ಲೆ):</strong> ತಾಲ್ಲೂಕಿನ ಬಿಳವಾರ ಗ್ರಾಮದ ವಾರ್ಡ್ ಸಂಖ್ಯೆ 1ರ ನಾಲ್ಕು ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಸದಸ್ಯರ ಆಯ್ಕೆಗೆಹರಾಜು ಕೂಗುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ.</p>.<p>‘ಸಾಮಾನ್ಯ ವರ್ಗಕ್ಕೆ ಮೀಸಲಾದ ಸದಸ್ಯ ಸ್ಥಾನವನ್ನು ಪರಿಶಿಷ್ಟ ಜಾತಿಯ ವ್ಯಕ್ತಿ ₹ 8.55 ಲಕ್ಷಕ್ಕೆ, ಪರಿಶಿಷ್ಟ ಜಾತಿ ಮಹಿಳೆ ಸ್ಥಾನಕ್ಕೆ ₹ 7.25 ಲಕ್ಷ, ಪರಿಶಿಷ್ಟ ಜಾತಿ ಪುರುಷ ಸ್ಥಾನಕ್ಕೆ ₹ 5.50 ಲಕ್ಷ, ಪರಿಶಿಷ್ಟ ಪಂಗಡ ಮಹಿಳೆ ಸ್ಥಾನಕ್ಕೆ ₹ 5.25 ಲಕ್ಷ ನೀಡಲು ಹರಾಜು ಕೂಗಲಾಗಿದೆ’ ಎಂದು ಗ್ರಾಮದ ಕೆಲವರು ಆರೋಪಿಸಿದ್ದಾರೆ.</p>.<p>‘ಹರಾಜಿನಲ್ಲಿ ಸ್ಥಾನ ಗಿಟ್ಟಿಸಿಕೊಂಡವರು ನಿಗದಿತ ದಿನಾಂಕದಂದು ಹಣ ಪಾವತಿಸದಿದ್ದಲ್ಲಿ, ಸ್ಥಾನಗಳು ಬೇರೆಯವರ ಪಾಲಾಗುತ್ತವೆ ಎಂದು ಗ್ರಾಮದ ಮುಖಂಡರು ಷರತ್ತು ವಿಧಿಸಿದ್ದಾರೆ. ಹರಾಜು ಪ್ರಕ್ರಿಯೆ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಲಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.</p>.<p>‘ಹರಾಜು ನಡೆಸಿದವರು ಯಾರು? ಹರಾಜಿನಿಂದ ಬಂದ ಹಣ ಏನು ಮಾಡಲಾಗುತ್ತದೆ’ ಎನ್ನುವ ಪ್ರಶ್ನೆಗೆ ಉತ್ತರಿಸಲು ಗ್ರಾಮಸ್ಥರು ಹಿಂದೇಟು ಹಾಕಿದರು.</p>.<p>‘ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಮಾಡಿರುವುದು ಗಮನಕ್ಕೆ ಬಂದಿಲ್ಲ. ಆ ಗ್ರಾಮದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿದ್ದು, ಶೀಘ್ರವೇ ಸಭೆ ನಡೆಸಿ ಚರ್ಚಿಸುತ್ತೇವೆ’ ಎಂದು ಮಾಜಿ ಶಾಸಕ, ಬಿಜೆಪಿಯ ದೊಡ್ಡಪ್ಪಗೌಡ ಪಾಟೀಲ ನರಿಬೋಳ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ (ಕಲಬುರ್ಗಿ ಜಿಲ್ಲೆ):</strong> ತಾಲ್ಲೂಕಿನ ಬಿಳವಾರ ಗ್ರಾಮದ ವಾರ್ಡ್ ಸಂಖ್ಯೆ 1ರ ನಾಲ್ಕು ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಸದಸ್ಯರ ಆಯ್ಕೆಗೆಹರಾಜು ಕೂಗುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ.</p>.<p>‘ಸಾಮಾನ್ಯ ವರ್ಗಕ್ಕೆ ಮೀಸಲಾದ ಸದಸ್ಯ ಸ್ಥಾನವನ್ನು ಪರಿಶಿಷ್ಟ ಜಾತಿಯ ವ್ಯಕ್ತಿ ₹ 8.55 ಲಕ್ಷಕ್ಕೆ, ಪರಿಶಿಷ್ಟ ಜಾತಿ ಮಹಿಳೆ ಸ್ಥಾನಕ್ಕೆ ₹ 7.25 ಲಕ್ಷ, ಪರಿಶಿಷ್ಟ ಜಾತಿ ಪುರುಷ ಸ್ಥಾನಕ್ಕೆ ₹ 5.50 ಲಕ್ಷ, ಪರಿಶಿಷ್ಟ ಪಂಗಡ ಮಹಿಳೆ ಸ್ಥಾನಕ್ಕೆ ₹ 5.25 ಲಕ್ಷ ನೀಡಲು ಹರಾಜು ಕೂಗಲಾಗಿದೆ’ ಎಂದು ಗ್ರಾಮದ ಕೆಲವರು ಆರೋಪಿಸಿದ್ದಾರೆ.</p>.<p>‘ಹರಾಜಿನಲ್ಲಿ ಸ್ಥಾನ ಗಿಟ್ಟಿಸಿಕೊಂಡವರು ನಿಗದಿತ ದಿನಾಂಕದಂದು ಹಣ ಪಾವತಿಸದಿದ್ದಲ್ಲಿ, ಸ್ಥಾನಗಳು ಬೇರೆಯವರ ಪಾಲಾಗುತ್ತವೆ ಎಂದು ಗ್ರಾಮದ ಮುಖಂಡರು ಷರತ್ತು ವಿಧಿಸಿದ್ದಾರೆ. ಹರಾಜು ಪ್ರಕ್ರಿಯೆ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಲಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.</p>.<p>‘ಹರಾಜು ನಡೆಸಿದವರು ಯಾರು? ಹರಾಜಿನಿಂದ ಬಂದ ಹಣ ಏನು ಮಾಡಲಾಗುತ್ತದೆ’ ಎನ್ನುವ ಪ್ರಶ್ನೆಗೆ ಉತ್ತರಿಸಲು ಗ್ರಾಮಸ್ಥರು ಹಿಂದೇಟು ಹಾಕಿದರು.</p>.<p>‘ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಮಾಡಿರುವುದು ಗಮನಕ್ಕೆ ಬಂದಿಲ್ಲ. ಆ ಗ್ರಾಮದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿದ್ದು, ಶೀಘ್ರವೇ ಸಭೆ ನಡೆಸಿ ಚರ್ಚಿಸುತ್ತೇವೆ’ ಎಂದು ಮಾಜಿ ಶಾಸಕ, ಬಿಜೆಪಿಯ ದೊಡ್ಡಪ್ಪಗೌಡ ಪಾಟೀಲ ನರಿಬೋಳ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>