<p><strong>ಕಲಬುರ್ಗಿ</strong>: ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ಹಂಚಿಕೆ ಸಮಯದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.</p>.<p>ಚಿಂಚೋಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸಲು ಜ. 16ರರಂದು ಬೆಳಿಗ್ಗೆ 10 ಗಂಟೆಗೆ ಚಿಂಚೋಳಿಯ ಸಿ.ಬಿ. ಪಾಟೀಲ ಪಿಯು ಕಾಲೇಜಿನಲ್ಲಿ ನಿಗದಿಪಡಿಸಲಾಗಿತ್ತು. ಅಂದು ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅದೇ ದಿನ ಮಧ್ಯಾಹ್ನ 1 ಗಂಟೆಗೆ ಪ್ರಕ್ರಿಯೆ ನಡೆಸಲಾಗುತ್ತಿದೆ.</p>.<p>ಅದೇ ರೀತಿ ಕಾಳಗಿ ತಾಲ್ಲೂಕಿನ ಗ್ರಾ.ಪಂ.ಗಳಿಗೆ ಜನವರಿ 16 ರಂದು ಮಧ್ಯಾಹ್ನ 2 ಗಂಟೆಗೆ ಕಾಳಗಿಯ ಕಾಳೇಶ್ವರ ದೇವಸ್ಥಾನದ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದನ್ನು, ಸಾಯಂಕಾಲ 4 ಗಂಟೆಗೆ ನಿಗದಿಪಡಿಸಿದೆ.</p>.<p>ಸಂಬಂಧಪಟ್ಟ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರ ಸಹಯೋಗದೊಂದಿಗೆ ಯಾವುದೇ ಲೋಪವಾಗದಂತೆ ಪ್ರಕ್ರಿಯೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ಹಂಚಿಕೆ ಸಮಯದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.</p>.<p>ಚಿಂಚೋಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸಲು ಜ. 16ರರಂದು ಬೆಳಿಗ್ಗೆ 10 ಗಂಟೆಗೆ ಚಿಂಚೋಳಿಯ ಸಿ.ಬಿ. ಪಾಟೀಲ ಪಿಯು ಕಾಲೇಜಿನಲ್ಲಿ ನಿಗದಿಪಡಿಸಲಾಗಿತ್ತು. ಅಂದು ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅದೇ ದಿನ ಮಧ್ಯಾಹ್ನ 1 ಗಂಟೆಗೆ ಪ್ರಕ್ರಿಯೆ ನಡೆಸಲಾಗುತ್ತಿದೆ.</p>.<p>ಅದೇ ರೀತಿ ಕಾಳಗಿ ತಾಲ್ಲೂಕಿನ ಗ್ರಾ.ಪಂ.ಗಳಿಗೆ ಜನವರಿ 16 ರಂದು ಮಧ್ಯಾಹ್ನ 2 ಗಂಟೆಗೆ ಕಾಳಗಿಯ ಕಾಳೇಶ್ವರ ದೇವಸ್ಥಾನದ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದನ್ನು, ಸಾಯಂಕಾಲ 4 ಗಂಟೆಗೆ ನಿಗದಿಪಡಿಸಿದೆ.</p>.<p>ಸಂಬಂಧಪಟ್ಟ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರ ಸಹಯೋಗದೊಂದಿಗೆ ಯಾವುದೇ ಲೋಪವಾಗದಂತೆ ಪ್ರಕ್ರಿಯೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>