‘ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಮಾಡಿರುವುದು ಗಮನಕ್ಕೆ ಬಂದಿಲ್ಲ. ಆ ಗ್ರಾಮದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿದ್ದು, ಶೀಘ್ರವೇ ಸಭೆ ನಡೆಸಿ ಚರ್ಚಿಸುತ್ತೇವೆ’ ಎಂದು ಮಾಜಿ ಶಾಸಕ, ಬಿಜೆಪಿಯ ದೊಡ್ಡಪ್ಪಗೌಡ ಪಾಟೀಲ ನರಿಬೋಳ ತಿಳಿಸಿದ್ದಾರೆ.ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಭಾವಿಗಳು ಹೆದರಿಸಿದರೆ ಸ್ಪರ್ಧಿಸುವವರಿಗೆ ರಕ್ಷಣೆ ನೀಡುತ್ತೇವೆ ಎಂದು ಯಡ್ರಾಮಿ ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ತಿಳಿಸಿದ್ದಾರೆ.