ಕಲಬುರಗಿ: ‘ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ 453 ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಘೋಷಿಸಿ, ಹಕ್ಕುಪತ್ರ ವಿತರಿಸಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ ಘೋಷಿಸಿದರು.
ಸೇಡಂ ತಾಲ್ಲೂಕಿನ ಆಡಕಿ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು, ‘ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಪೈಲಟ್ ಯೋಜನೆಯಾಗಿ ಕಲಬುರಗಿ ಜಿಲ್ಲೆ ಆಯ್ಕೆ ಮಾಡಲಾಗಿದೆ’ ಎಂದರು.