<p><strong>ಅಫಜಲಪುರ: ‘</strong>ಎಲ್ಲ ಇಲಾಖೆಯ ಅಧಿಕಾರಿಗಳು ಒಂದು ಕಡೆ ಸೇರುವುದರಿಂದ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಇದರ ಲಾಭವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು. ಕೇವಲ ಶಾಸಕರೊಬ್ಬರ ಕೆಲಸ ಮಾಡಿದರೆ ಸಾಲದು ಅಧಿಕಾರಿಗಳು ಕೈಜೋಡಿಸಿದರೆ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಆಗುತ್ತವೆ’ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.</p>.<p>ತಾಲ್ಲೂಕಿನ ಮಲ್ಲಾಬಾದ ಗ್ರಾ.ಪಂ ವ್ಯಾಪ್ತಿಯ ಮಾತೋಳಿ ಗ್ರಾಮದಲ್ಲಿ ನಡೆದ ತಹಸೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮದ ಮುಖಂಡ ಮಹಾಂತಪ್ಪ ಬಬಲೇಶ್ವರ ಮಾತನಾಡಿ, ಸ್ಮಶಾನ, ಕುಡಿಯುವ ನೀರು, ಹೊಲ ಗದ್ದೆಗಳಿಗೆ ರಾತ್ರಿ ವಿದ್ಯುತ್ ಪೂರೈಕೆ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದರು.</p>.<p>ತಹಶೀಲ್ದಾರ್ ಸಂಜೀವಕುಮಾರ ದಾಸರ್, ‘ಪಹಣಿ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಲಾಗುತ್ತದೆ, ಪಿಂಚಣಿ ಸಮಸ್ಯೆ ಇರುವವರಿಗೆ ಸ್ಥಳದಲ್ಲೇ ಸಮಸ್ಯೆ ಪರಿಶೀಲಿಸಿ ಪರಿಹಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಭಾಗ್ಯಲಕ್ಷ್ಮೀ, ಪಿಂಚಣಿ ಯೋಜನೆಳ ಫಲಾನುಭವಿಗಳಿಗೆ ಸ್ಥಳದಲ್ಲೇ ಬಾಂಡ್ ವಿತರಣೆ ಮಾಡಲಾಯಿತು. ವಿದ್ಯುತ್ ಸಮಸ್ಯೆ ಕುರಿತು ಜೇಸ್ಕಾಂ ಅಧಿಕಾರಿಗಳು ಸಮಸ್ಯೆ ಪರಿಹಾರ ಮಾಡುವುದಾಗಿ ಭರವಸೆ ನೀಡಿದರು.</p>.<p>ಗ್ರಾ.ಪಂ ಅಧ್ಯಕ್ಷ ಚಿದಾನಂದ ಬಸರಿಗಿಡ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷೆ ಕಲ್ಲವ್ವ ಈರಕರ, ಸದಸ್ಯ ಸಂಗಣ್ಣ ಆಲಮೇಲ, ಸತೀಶ ಜಮಾದಾರ, ಮುಖಂಡರಾದ ವಿಜಯಕುಮಾರ ಸಗರ, ದಿಗಂಬರ ಪಾಟೀಲ್, ಮಲ್ಲಿಕಾರ್ಜುನ ಪೂಜಾರಿ, ಅಶೋಕ ಬಗಲಿ ಮತ್ತಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ: ‘</strong>ಎಲ್ಲ ಇಲಾಖೆಯ ಅಧಿಕಾರಿಗಳು ಒಂದು ಕಡೆ ಸೇರುವುದರಿಂದ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಇದರ ಲಾಭವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು. ಕೇವಲ ಶಾಸಕರೊಬ್ಬರ ಕೆಲಸ ಮಾಡಿದರೆ ಸಾಲದು ಅಧಿಕಾರಿಗಳು ಕೈಜೋಡಿಸಿದರೆ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಆಗುತ್ತವೆ’ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.</p>.<p>ತಾಲ್ಲೂಕಿನ ಮಲ್ಲಾಬಾದ ಗ್ರಾ.ಪಂ ವ್ಯಾಪ್ತಿಯ ಮಾತೋಳಿ ಗ್ರಾಮದಲ್ಲಿ ನಡೆದ ತಹಸೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮದ ಮುಖಂಡ ಮಹಾಂತಪ್ಪ ಬಬಲೇಶ್ವರ ಮಾತನಾಡಿ, ಸ್ಮಶಾನ, ಕುಡಿಯುವ ನೀರು, ಹೊಲ ಗದ್ದೆಗಳಿಗೆ ರಾತ್ರಿ ವಿದ್ಯುತ್ ಪೂರೈಕೆ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದರು.</p>.<p>ತಹಶೀಲ್ದಾರ್ ಸಂಜೀವಕುಮಾರ ದಾಸರ್, ‘ಪಹಣಿ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಲಾಗುತ್ತದೆ, ಪಿಂಚಣಿ ಸಮಸ್ಯೆ ಇರುವವರಿಗೆ ಸ್ಥಳದಲ್ಲೇ ಸಮಸ್ಯೆ ಪರಿಶೀಲಿಸಿ ಪರಿಹಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಭಾಗ್ಯಲಕ್ಷ್ಮೀ, ಪಿಂಚಣಿ ಯೋಜನೆಳ ಫಲಾನುಭವಿಗಳಿಗೆ ಸ್ಥಳದಲ್ಲೇ ಬಾಂಡ್ ವಿತರಣೆ ಮಾಡಲಾಯಿತು. ವಿದ್ಯುತ್ ಸಮಸ್ಯೆ ಕುರಿತು ಜೇಸ್ಕಾಂ ಅಧಿಕಾರಿಗಳು ಸಮಸ್ಯೆ ಪರಿಹಾರ ಮಾಡುವುದಾಗಿ ಭರವಸೆ ನೀಡಿದರು.</p>.<p>ಗ್ರಾ.ಪಂ ಅಧ್ಯಕ್ಷ ಚಿದಾನಂದ ಬಸರಿಗಿಡ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷೆ ಕಲ್ಲವ್ವ ಈರಕರ, ಸದಸ್ಯ ಸಂಗಣ್ಣ ಆಲಮೇಲ, ಸತೀಶ ಜಮಾದಾರ, ಮುಖಂಡರಾದ ವಿಜಯಕುಮಾರ ಸಗರ, ದಿಗಂಬರ ಪಾಟೀಲ್, ಮಲ್ಲಿಕಾರ್ಜುನ ಪೂಜಾರಿ, ಅಶೋಕ ಬಗಲಿ ಮತ್ತಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>