ಅಫಜಲಪುರ: ‘ಎಲ್ಲ ಇಲಾಖೆಯ ಅಧಿಕಾರಿಗಳು ಒಂದು ಕಡೆ ಸೇರುವುದರಿಂದ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಇದರ ಲಾಭವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು. ಕೇವಲ ಶಾಸಕರೊಬ್ಬರ ಕೆಲಸ ಮಾಡಿದರೆ ಸಾಲದು ಅಧಿಕಾರಿಗಳು ಕೈಜೋಡಿಸಿದರೆ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಆಗುತ್ತವೆ’ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.
ತಾಲ್ಲೂಕಿನ ಮಲ್ಲಾಬಾದ ಗ್ರಾ.ಪಂ ವ್ಯಾಪ್ತಿಯ ಮಾತೋಳಿ ಗ್ರಾಮದಲ್ಲಿ ನಡೆದ ತಹಸೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮದ ಮುಖಂಡ ಮಹಾಂತಪ್ಪ ಬಬಲೇಶ್ವರ ಮಾತನಾಡಿ, ಸ್ಮಶಾನ, ಕುಡಿಯುವ ನೀರು, ಹೊಲ ಗದ್ದೆಗಳಿಗೆ ರಾತ್ರಿ ವಿದ್ಯುತ್ ಪೂರೈಕೆ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ಸಂಜೀವಕುಮಾರ ದಾಸರ್, ‘ಪಹಣಿ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಲಾಗುತ್ತದೆ, ಪಿಂಚಣಿ ಸಮಸ್ಯೆ ಇರುವವರಿಗೆ ಸ್ಥಳದಲ್ಲೇ ಸಮಸ್ಯೆ ಪರಿಶೀಲಿಸಿ ಪರಿಹಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಭಾಗ್ಯಲಕ್ಷ್ಮೀ, ಪಿಂಚಣಿ ಯೋಜನೆಳ ಫಲಾನುಭವಿಗಳಿಗೆ ಸ್ಥಳದಲ್ಲೇ ಬಾಂಡ್ ವಿತರಣೆ ಮಾಡಲಾಯಿತು. ವಿದ್ಯುತ್ ಸಮಸ್ಯೆ ಕುರಿತು ಜೇಸ್ಕಾಂ ಅಧಿಕಾರಿಗಳು ಸಮಸ್ಯೆ ಪರಿಹಾರ ಮಾಡುವುದಾಗಿ ಭರವಸೆ ನೀಡಿದರು.
ಗ್ರಾ.ಪಂ ಅಧ್ಯಕ್ಷ ಚಿದಾನಂದ ಬಸರಿಗಿಡ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷೆ ಕಲ್ಲವ್ವ ಈರಕರ, ಸದಸ್ಯ ಸಂಗಣ್ಣ ಆಲಮೇಲ, ಸತೀಶ ಜಮಾದಾರ, ಮುಖಂಡರಾದ ವಿಜಯಕುಮಾರ ಸಗರ, ದಿಗಂಬರ ಪಾಟೀಲ್, ಮಲ್ಲಿಕಾರ್ಜುನ ಪೂಜಾರಿ, ಅಶೋಕ ಬಗಲಿ ಮತ್ತಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.