ಬೆಂಗಳೂರಿನಿಂದ ವಿಮಾನ ನಿಲ್ದಾಣದ ಮೂಲಕ ಬೆಳಿಗ್ಗೆ 11.45ಕ್ಕೆ ಬಂದ ಖರ್ಗೆ ಅವರನ್ನು ವಿಮಾನ ನಿಲ್ದಾಣದಲ್ಲಿ ಪಕ್ಷದ ವಕ್ತಾರ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಕಲಬುರ್ಗಿ ದಕ್ಷಿಣ ಶಾಸಕಿ ಕನೀಜ್ ಫಾತಿಮಾ, ಮಾಜಿ ಶಾಸಕ ಬಿ.ಆರ್. ಪಾಟೀಲ, ಮುಖಂಡ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಹಲವರು ಖರ್ಗೆ ಅವರನ್ನು ಸ್ವಾಗತಿಸಿದರು.