ತಾಲ್ಲೂಕಿನಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಸಾಕಷ್ಟಿದೆ. ಆದರೆ, ಆರೈಕೆ ಕೇಂದ್ರಕ್ಕೆ ಬಂದು ದಾಖಲಾಗಲು ಯಾರೂ ಮುಂದೆ ಬರುತ್ತಿಲ್ಲ. ಇದರಿಂದ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಹಮದ್ ಗಫಾರ, ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ, ಡಾ. ಲತೀಫ್ ಪರಿಸರ ಎಂಜಿನಿಯರ್ ಸಂಗಮೇಶ ಶೆಟ್ಟಿ ಅವರು ಸೇರಿಕೊಂಡು ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಸಂಚರಿಸಿ, ಕೋವಿಡ್ ಕೇರ್ ಸೆಂಟರ್ಗೆ ಬರುವಂತೆ ಸೋಂಕಿತರ ಮನೆಗೇ ತೆರಳು ಮನವಿ ಮಾಡಿದರು.