ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ 11 ಚಿನ್ನದ ಪದಕಗಳನ್ನು ಪಡೆದ ಜಯಶ್ರೀ ಶಿವಶರಣಪ್ಪ ಅವರಿಗೆ ಹಂಗಾಮಿ ಕುಲಪತಿ ಡಾ.ಚಂದ್ರಕಾಂತ ಯಾತನೂರ ಅವರು ಚಿನ್ನದ ಪದಕ ಹಾಗೂ ಪ್ರಮಾಣಪತ್ರವನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಮಂತ್ರಾಲಯದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ನೀಡಲಾಯಿತು.
ವಿಶ್ವವಿದ್ಯಾಲಯದ ಡಾ.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ 38ನೇ ಘಟಿಕೋತ್ಸವದಲ್ಲಿ ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ಐಸೆಕ್) ನಿರ್ದೇಶಕ ಡಾ.ಎಸ್. ಮಾದೇಶ್ವರನ್ ದಿಕ್ಸೂಚಿ ಭಾಷಣ ಮಾಡಿದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಆನ್ ಲೈನ್ ಮೂಲಕ ಸಂದೇಶ ನೀಡಿದರು.
ಕುಲಸಚಿವ ಪ್ರೊ.ಸಿ.ಸೋಮಶೇಖರ್, ಮೌಲ್ಯಮಾಪನ ಕುಲಸಚಿವ ಪ್ರೊ. ಸಂಜೀವ ಕುಮಾರ್ ಹಾಗೂ ವಿವಿಧ ನಿಕಾಯಗಳ ಡೀನ್ ಗಳು ಇದ್ದರು.