<p><strong>ಕಲಬುರ್ಗಿ: </strong>ಸೆಪ್ಟೆಂಬರ್ 3ರಿಂದ 20ರವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಘಟಿಕೋತ್ಸವ ಆಯೋಜಿಸಲು ವಿ.ವಿ. ನಿರ್ಧರಿಸುವ ನಿರೀಕ್ಷೆ ಇದೆ.</p>.<p>ಈ ಸಂಬಂಧ ಇದೇ 28ರಂದು ಸಿಂಡಿಕೇಟ್ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಘಟಿಕೋತ್ಸವದಲ್ಲಿ ಚಿನ್ನದ ಪದಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಭಾಗವಹಿಸಲು ಮತ್ತು ಉಳಿದ ವಿದ್ಯಾರ್ಥಿಗಳು ವರ್ಚ್ಯುವಲ್ (ಆನ್ಲೈನ್) ವಿಧಾನದ ಮೂಲಕ ಭಾಗವಹಿಸಲು ಅವಕಾಶ ನೀಡುವ ಬಗ್ಗೆ ಚಿಂತನೆ ನಡೆದಿದೆ.</p>.<p>‘ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೈಹಿಕ ಅಂತರ ಕಾಯ್ದುಕೊಂಡು ನಡೆಸುವುದಕ್ಕೆ ಮೊದಲ ಆದ್ಯತೆ ನೀಡಲಿದ್ದೇವೆ’ ಎಂದು ಗುಲಬರ್ಗಾ ವಿ.ವಿ. ಹಂಗಾಮಿ ಕುಲಪತಿ ಪ್ರೊ.ಚಂದ್ರಕಾಂತ ಯಾತನೂರ ತಿಳಿಸಿದರು.</p>.<p>‘ರಾಜ್ಯ ಸರ್ಕಾರ ಲಾಕ್ಡೌನ್ ತೆರವುಗೊಳಿಸಿ ವ್ಯಾಪಾರ ವಹಿವಾಟು, ಜನ ಸಂಚಾರಕ್ಕೆ ಅವಕಾಶ ನೀಡಿದ್ದರೂ ಶಾಲಾ, ಕಾಲೇಜುಗಳ ಆರಂಭಕ್ಕೆ ಇನ್ನೂ ಅನುಮತಿ ನೀಡಿಲ್ಲ. ಲಾಕ್ಡೌನ್ ತೆರವುಗೊಂಡಿದ್ದರಿಂದ ಹೆಚ್ಚು ಜನರ ಓಡಾಟದಿಂದಾಗಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಸಾವಿನ ಪ್ರಮಾಣದಲ್ಲಿಯೂ ಏರಿಕೆಯಾಗುತ್ತಿದೆ. ಇದರಿಂದ ಘಟಿಕೋತ್ಸವದ ಸಂದರ್ಭ<br />ದಲ್ಲಿ ಹೆಚ್ಚು ಜನರನ್ನು ಸೇರಿಸದಿರಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಸೆಪ್ಟೆಂಬರ್ ಕೊನೆಯ ಹೊತ್ತಿಗೆ ಸೋಂಕಿನ ಪ್ರಮಾಣ ಕಡಿಮೆಯಾದರೆ ಎಂದಿನಂತೆ ವಿದ್ಯಾರ್ಥಿಗಳನ್ನು ಭೌತಿಕವಾಗಿ ಒಂದೆಡೆ ಸೇರಿಸಿ ಪದವಿ ಪ್ರಮಾಣವನ್ನು ಹಂಚಿಕೆ ಮಾಡುವ ಯೋಜನೆಯೂ ಇದೆ’ ಎಂದು ಮಾಹಿತಿ ನೀಡಿದರು.</p>.<p>ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದರೂ ಕುಲಪತಿಗಳ ನೇಮಕ ಇನ್ನೂ ಆಗಿಲ್ಲ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕಾಲೇಜುಗಳು ರಾಯಚೂರು ವಿ.ವಿ.ಯೊಂದಿಗೆ ಸಂಯೋಜನೆ ಹೊಂದಲಿವೆ. ಸಿಬ್ಬಂದಿ, ಆಸ್ತಿ ವರ್ಗಾವಣೆಯೂ ಆಗಲಿದೆ. ಆದರೆ, ಪ್ರಸಕ್ತ ವರ್ಷದಲ್ಲಿ ಈ ಎರಡೂ ಜಿಲ್ಲೆಗಳು ಸೇರಿದಂತೆ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಯ ವಿದ್ಯಾರ್ಥಿಗಳು ಗುಲಬರ್ಗಾ ವಿ.ವಿ. ಅಧೀನದಲ್ಲೇ ಪರೀಕ್ಷೆ ಬರೆಯುವರು. ಇದಕ್ಕಾಗಿ ಪ್ರಾಥಮಿಕ ಸಿದ್ಧತೆ ಆರಂಭಿಸಿರುವ ವಿಶ್ವವಿದ್ಯಾಲಯದ ಪರೀಕ್ಷಾಂಗವು ಕಾಲೇಜುಗಳ ದೊಡ್ಡ ಸಭಾಂಗಣಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಪರೀಕ್ಷೆ ನಡೆಸಲಿದೆ.</p>.<p>‘ಆನ್ಲೈನ್ ಮೂಲಕ ಪಠ್ಯ ಪೂರೈಸುವ ಪ್ರಯೋಗ ಅಷ್ಟೊಂದು ಯಶಸ್ವಿಯಾಗಿಲ್ಲ. ಹೀಗಾಗಿ, ಸ್ನಾತಕೋತ್ತರ ಪರೀಕ್ಷೆಯ ದಿನಾಂಕ ಪ್ರಕಟವಾದ ಕೂಡಲೇ ಅದಕ್ಕೂ ಮೊದಲು ಒಂದು ವಾರ ತರಗತಿ ನಡೆಸುತ್ತೇವೆ’ ಎಂದು ಗುಲಬರ್ಗಾ ವಿ.ವಿ.ಯ ಹಿರಿಯ ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಸೆಪ್ಟೆಂಬರ್ 3ರಿಂದ 20ರವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಘಟಿಕೋತ್ಸವ ಆಯೋಜಿಸಲು ವಿ.ವಿ. ನಿರ್ಧರಿಸುವ ನಿರೀಕ್ಷೆ ಇದೆ.</p>.<p>ಈ ಸಂಬಂಧ ಇದೇ 28ರಂದು ಸಿಂಡಿಕೇಟ್ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಘಟಿಕೋತ್ಸವದಲ್ಲಿ ಚಿನ್ನದ ಪದಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಭಾಗವಹಿಸಲು ಮತ್ತು ಉಳಿದ ವಿದ್ಯಾರ್ಥಿಗಳು ವರ್ಚ್ಯುವಲ್ (ಆನ್ಲೈನ್) ವಿಧಾನದ ಮೂಲಕ ಭಾಗವಹಿಸಲು ಅವಕಾಶ ನೀಡುವ ಬಗ್ಗೆ ಚಿಂತನೆ ನಡೆದಿದೆ.</p>.<p>‘ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೈಹಿಕ ಅಂತರ ಕಾಯ್ದುಕೊಂಡು ನಡೆಸುವುದಕ್ಕೆ ಮೊದಲ ಆದ್ಯತೆ ನೀಡಲಿದ್ದೇವೆ’ ಎಂದು ಗುಲಬರ್ಗಾ ವಿ.ವಿ. ಹಂಗಾಮಿ ಕುಲಪತಿ ಪ್ರೊ.ಚಂದ್ರಕಾಂತ ಯಾತನೂರ ತಿಳಿಸಿದರು.</p>.<p>‘ರಾಜ್ಯ ಸರ್ಕಾರ ಲಾಕ್ಡೌನ್ ತೆರವುಗೊಳಿಸಿ ವ್ಯಾಪಾರ ವಹಿವಾಟು, ಜನ ಸಂಚಾರಕ್ಕೆ ಅವಕಾಶ ನೀಡಿದ್ದರೂ ಶಾಲಾ, ಕಾಲೇಜುಗಳ ಆರಂಭಕ್ಕೆ ಇನ್ನೂ ಅನುಮತಿ ನೀಡಿಲ್ಲ. ಲಾಕ್ಡೌನ್ ತೆರವುಗೊಂಡಿದ್ದರಿಂದ ಹೆಚ್ಚು ಜನರ ಓಡಾಟದಿಂದಾಗಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಸಾವಿನ ಪ್ರಮಾಣದಲ್ಲಿಯೂ ಏರಿಕೆಯಾಗುತ್ತಿದೆ. ಇದರಿಂದ ಘಟಿಕೋತ್ಸವದ ಸಂದರ್ಭ<br />ದಲ್ಲಿ ಹೆಚ್ಚು ಜನರನ್ನು ಸೇರಿಸದಿರಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಸೆಪ್ಟೆಂಬರ್ ಕೊನೆಯ ಹೊತ್ತಿಗೆ ಸೋಂಕಿನ ಪ್ರಮಾಣ ಕಡಿಮೆಯಾದರೆ ಎಂದಿನಂತೆ ವಿದ್ಯಾರ್ಥಿಗಳನ್ನು ಭೌತಿಕವಾಗಿ ಒಂದೆಡೆ ಸೇರಿಸಿ ಪದವಿ ಪ್ರಮಾಣವನ್ನು ಹಂಚಿಕೆ ಮಾಡುವ ಯೋಜನೆಯೂ ಇದೆ’ ಎಂದು ಮಾಹಿತಿ ನೀಡಿದರು.</p>.<p>ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದರೂ ಕುಲಪತಿಗಳ ನೇಮಕ ಇನ್ನೂ ಆಗಿಲ್ಲ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕಾಲೇಜುಗಳು ರಾಯಚೂರು ವಿ.ವಿ.ಯೊಂದಿಗೆ ಸಂಯೋಜನೆ ಹೊಂದಲಿವೆ. ಸಿಬ್ಬಂದಿ, ಆಸ್ತಿ ವರ್ಗಾವಣೆಯೂ ಆಗಲಿದೆ. ಆದರೆ, ಪ್ರಸಕ್ತ ವರ್ಷದಲ್ಲಿ ಈ ಎರಡೂ ಜಿಲ್ಲೆಗಳು ಸೇರಿದಂತೆ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಯ ವಿದ್ಯಾರ್ಥಿಗಳು ಗುಲಬರ್ಗಾ ವಿ.ವಿ. ಅಧೀನದಲ್ಲೇ ಪರೀಕ್ಷೆ ಬರೆಯುವರು. ಇದಕ್ಕಾಗಿ ಪ್ರಾಥಮಿಕ ಸಿದ್ಧತೆ ಆರಂಭಿಸಿರುವ ವಿಶ್ವವಿದ್ಯಾಲಯದ ಪರೀಕ್ಷಾಂಗವು ಕಾಲೇಜುಗಳ ದೊಡ್ಡ ಸಭಾಂಗಣಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಪರೀಕ್ಷೆ ನಡೆಸಲಿದೆ.</p>.<p>‘ಆನ್ಲೈನ್ ಮೂಲಕ ಪಠ್ಯ ಪೂರೈಸುವ ಪ್ರಯೋಗ ಅಷ್ಟೊಂದು ಯಶಸ್ವಿಯಾಗಿಲ್ಲ. ಹೀಗಾಗಿ, ಸ್ನಾತಕೋತ್ತರ ಪರೀಕ್ಷೆಯ ದಿನಾಂಕ ಪ್ರಕಟವಾದ ಕೂಡಲೇ ಅದಕ್ಕೂ ಮೊದಲು ಒಂದು ವಾರ ತರಗತಿ ನಡೆಸುತ್ತೇವೆ’ ಎಂದು ಗುಲಬರ್ಗಾ ವಿ.ವಿ.ಯ ಹಿರಿಯ ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>