ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಜ್ಞಾನಗಂಗಾ ಎಂಬ ವಿಶೇಷ ಸಂಚಿಕೆ ಬಿಡುಗಡೆ ಮಾಡಲಾಯಿತು. ನವದೆಹಲಿಯ ಭಾರ ತೀಯ ವಿಶ್ವವಿದ್ಯಾಲಯಗಳ ಸಂಘದ ಮಹಾಕಾರ್ಯದರ್ಶಿ ಡಾ.ಬಲ್ಜಿತ್ ಸಿಂಗ್ ಸೆಖೊನ್, ಬನಾರಸ್ ವಿ.ವಿ.ಯ ಪ್ರೊ.ಬಾಲು, ಗುಲಬರ್ಗಾ ವಿ.ವಿ. ಸಿಂಡಿಕೇಟ್ ಸದಸ್ಯ ವಿ.ಟಿ.ಕಾಂಬಳೆ, ವಿದ್ಯಾವಿಷಯಕ ಪರಿಷತ್ ಸದಸ್ಯ ಬಸವ ರಾಜ ಪವಾರ, ಕುಲಸಚಿವ ಡಾ.ಬಿ.ಶರಣಪ್ಪ, ಕುಲಸಚಿವ (ಮೌಲ್ಯಮಾಪನ) ಪ್ರೊ. ಜ್ಯೋತಿ ಧಮ್ಮ ಪ್ರಕಾಶ, ವಿತ್ತಾಧಿಕಾರಿ ಪ್ರೊ. ರಾಜನಾಳಕರ್ ಲಕ್ಷ್ಮಣ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ.ಕೆ.ಲಿಂಗಪ್ಪ ಸೇರಿದಂತೆ ಛತ್ತೀಸಗಡ, ತೆಲಂಗಾಣ, ಬೆಂಗಳೂರು, ಧಾರವಾಡ, ತುಮಕೂರು, ದಾವಣಗೆರೆ ಸೇರಿದಂತೆ ಮೂರು ರಾಜ್ಯಗಳ 28 ವಿವಿಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.