ಆದಾಗ್ಯೂ ಅದೇ ವಿಭಾಗದಲ್ಲಿ ಎಂ.ಫಿಲ್. ಪದವಿಗೆ ಸೀಟು ಸಿಕ್ಕಿತ್ತು. ಆದರೆ, ವಿದ್ಯಾರ್ಥಿ ಪೂರ್ಣಪ್ರಮಾಣದಲ್ಲಿ ಸಂಶೋಧನೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದರೂ ಬೇರೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದುದರಿಂದ ವಿದ್ಯಾಸಾಗರ್ ಅವರು ಶಿಷ್ಯವೇತನದ ಮಂಜೂರಾತಿ ಪತ್ರಕ್ಕೆ ಸಹಿ ಹಾಕಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಮೇಲಕೇರಿ ಅವರು ವಿದ್ಯಾಸಾಗರ್ ಅವರ ಕಚೇರಿಗೆ ಬಂದು ವಾಗ್ವಾದ ಮಾಡಿ ವಿದ್ಯಾಸಾಗರ್ ಅವರ ಕಪಾಳಕ್ಕೆ ಏಟು ಕೊಟ್ಟಿದ್ದಾರೆ. ಹೀಗಾಗಿ ವಿದ್ಯಾಸಾಗರ್ ಅವರು ವಿ.ವಿ. ಅನುಮತಿ ಪಡೆದು ವಿಶ್ವವಿದ್ಯಾಲಯ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.