ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮಾನ ರಥೋತ್ಸವಕ್ಕೆ ಭಕ್ತಸಾಗರ

Last Updated 13 ಡಿಸೆಂಬರ್ 2019, 9:02 IST
ಅಕ್ಷರ ಗಾತ್ರ

ವಾಡಿ: ಪಟ್ಟಣ ಸಮೀಪದ ಕೊಂಚೂರಿನ ಪ್ರಸಿದ್ಧ ಹನುಮಾನ ದೇವಸ್ಥಾನದ ಜಾತ್ರೆ ನಿಮಿತ್ಯ ಗುರುವಾರ ಸಂಜೆ ರಥೋತ್ಸವ ಅದ್ಧೂರಿಯಿಂದ ಜರುಗಿತು.

ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ನೆರೆಯ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗುಜರಾತ್ ರಾಜ್ಯಗಳ ಭಕ್ತರು ಪಾಲ್ಗೊಂಡು ಭಕ್ತಿ ಮೆರೆದರು. ಒಂದು ವಾರದಿಂದ ನಡೆದ ಹಲವು ಧಾರ್ಮಿಕ ಕಾರ್ಯಕ್ರಮಗಳ ಅಂತಿಮ ಭಾಗವಾಗಿ ಗುರುವಾರ ಸಂಜೆ ತೇರು ಎಳೆದು ಸಂಭ್ರಮಿಸಿದರು.

ಹೂವು, ಛತ್ರಿ ಚಾಮರಗಳಿಂದ ಅಲಂಕೃತಗೊಂಡಿದ್ದ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಹನುಮಾನ ಮಹಾರಾಜಕೀ ಜೈ ಎನ್ನುವ ಭಕ್ತರ ಜಯಘೋಷಗಳ ನಡುವೆ ರಥೋತ್ಸವ ಸಾಗಿತು. ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತುತ್ತಿ ಎಸೆದು ಭಕ್ತಿ ಸಮರ್ಪಿಸಿದರು.

ವಾಡಿ ಹಾಗೂ ಚಿತ್ತಾಪುರ ಠಾಣೆಗಳ ಪೊಲೀಸರು ಬಿಗಿ ಬಂದೋಬಸ್ತ್‌ ಕಲ್ಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT