<p><strong>ಕಲಬುರಗಿ</strong>: ‘ವೈದ್ಯರು ಬಡವರ ಆರೋಗ್ಯ ಸೇವೆ ಮಾಡಿ ದೇವರನ್ನು ಕಾಣಬೇಕು. ರೋಗಿಗಳಿಗೆ ವೈದ್ಯರೇ ನಡೆದಾಡುವ ದೇವರು’ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಹೇಳಿದರು.</p>.<p>ನಗರದ ಜವಳಿ ಕಾಂಪ್ಲೆಕ್ಸ್ನಲ್ಲಿ ನೂತನವಾಗಿ ಆರಂಭಗೊಂಡ ಹರಿದಾಸ ಹಾರ್ಟ್ ಹಾಸ್ಪಿಟಲ್ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಭಾಗದಲ್ಲಿ ತಜ್ಞ ವೈದ್ಯರ ಕೊರತೆಯಿಂದ ರೋಗಿಗಳು ಚಿಕಿತ್ಸೆಗಾಗಿ ಸೋಲಾಪುರ, ಬೆಂಗಳೂರಿಗೆ ತೆರಳಬೇಕಿತ್ತು. ಆ ಯುಗಕ್ಕೆ ಅಂತ್ಯ ಹಾಡಲು ತಜ್ಞ ವೈದ್ಯರು ಕಲಬುರಗಿಯಲ್ಲೇ ಆಸ್ಪತ್ರೆ ಪ್ರಾರಂಭಿಸಿ, ಜನರ ಸೇವೆಗೆ ಮುಂದಾಗಿರುವುದು ಶ್ಲಾಘನೀಯ’ ಎಂದರು.</p>.<p>ಉದ್ಯಮಿ ರಾಘವೇಂದ್ರ ಮೈಲಾಪುರ ಮಾತನಾಡಿ, ‘ಕಲಬುರಗಿಯಲ್ಲಿ ಹೃದ್ರೋಗ ಆಸ್ಪತ್ರೆ ಪ್ರಾರಂಭವಾಗಿರುವುದು ಹೆಮ್ಮೆಯ ಸಂಗತಿ. ಡಾ.ಅರುಣಕುಮಾರ ಹರಿದಾಸ್ ಶ್ರೇಷ್ಠ ವೈದ್ಯರಾಗಿದ್ದು, ಅವರ ಸೇವೆ ಈ ಭಾಗಕ್ಕೆ ದೊಡ್ಡ ಕೊಡುಗೆ: ಎಂದರು.</p>.<p>ಎಚ್ಕೆಇ ಆಡಳಿತ ಮಂಡಳಿ ಮಾಜಿ ಸದಸ್ಯ ನಿತಿನ್ ಬಿ.ಜವಳಿ ಮಾತನಾಡಿದರು. ಉದ್ಯಮಿಗಳಾದ ವೆಂಕಟೇಶ ಕಡೇಚೂರ, ಡಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ, ಮಾಜಿ ಉಪಮೇಯರ್ ನಾಗವೇಣಿ ಕಮಕನೂರು ಇದ್ದರು.</p>.<p>ಪಾಲಿಕೆ ಉಪ ಆಯುಕ್ತೆ ಪ್ರಮೀಳಾ ಎಂ.ಕೆ., ಡಾ.ರಾಜೇಶ ಕಡೇಚೂರ, ಕೋಮಲೇಶ್ವರಿ ಅರುಣಕುಮಾರ, ಜಾದುಗಾರ ಕುದ್ರೋಳಿ ಗಣೇಶ ಇದ್ದರು. ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಅಧಿಕಾರಿ ಸದಾನಂದ ಪೆರ್ಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ವೈದ್ಯರು ಬಡವರ ಆರೋಗ್ಯ ಸೇವೆ ಮಾಡಿ ದೇವರನ್ನು ಕಾಣಬೇಕು. ರೋಗಿಗಳಿಗೆ ವೈದ್ಯರೇ ನಡೆದಾಡುವ ದೇವರು’ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಹೇಳಿದರು.</p>.<p>ನಗರದ ಜವಳಿ ಕಾಂಪ್ಲೆಕ್ಸ್ನಲ್ಲಿ ನೂತನವಾಗಿ ಆರಂಭಗೊಂಡ ಹರಿದಾಸ ಹಾರ್ಟ್ ಹಾಸ್ಪಿಟಲ್ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಭಾಗದಲ್ಲಿ ತಜ್ಞ ವೈದ್ಯರ ಕೊರತೆಯಿಂದ ರೋಗಿಗಳು ಚಿಕಿತ್ಸೆಗಾಗಿ ಸೋಲಾಪುರ, ಬೆಂಗಳೂರಿಗೆ ತೆರಳಬೇಕಿತ್ತು. ಆ ಯುಗಕ್ಕೆ ಅಂತ್ಯ ಹಾಡಲು ತಜ್ಞ ವೈದ್ಯರು ಕಲಬುರಗಿಯಲ್ಲೇ ಆಸ್ಪತ್ರೆ ಪ್ರಾರಂಭಿಸಿ, ಜನರ ಸೇವೆಗೆ ಮುಂದಾಗಿರುವುದು ಶ್ಲಾಘನೀಯ’ ಎಂದರು.</p>.<p>ಉದ್ಯಮಿ ರಾಘವೇಂದ್ರ ಮೈಲಾಪುರ ಮಾತನಾಡಿ, ‘ಕಲಬುರಗಿಯಲ್ಲಿ ಹೃದ್ರೋಗ ಆಸ್ಪತ್ರೆ ಪ್ರಾರಂಭವಾಗಿರುವುದು ಹೆಮ್ಮೆಯ ಸಂಗತಿ. ಡಾ.ಅರುಣಕುಮಾರ ಹರಿದಾಸ್ ಶ್ರೇಷ್ಠ ವೈದ್ಯರಾಗಿದ್ದು, ಅವರ ಸೇವೆ ಈ ಭಾಗಕ್ಕೆ ದೊಡ್ಡ ಕೊಡುಗೆ: ಎಂದರು.</p>.<p>ಎಚ್ಕೆಇ ಆಡಳಿತ ಮಂಡಳಿ ಮಾಜಿ ಸದಸ್ಯ ನಿತಿನ್ ಬಿ.ಜವಳಿ ಮಾತನಾಡಿದರು. ಉದ್ಯಮಿಗಳಾದ ವೆಂಕಟೇಶ ಕಡೇಚೂರ, ಡಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ, ಮಾಜಿ ಉಪಮೇಯರ್ ನಾಗವೇಣಿ ಕಮಕನೂರು ಇದ್ದರು.</p>.<p>ಪಾಲಿಕೆ ಉಪ ಆಯುಕ್ತೆ ಪ್ರಮೀಳಾ ಎಂ.ಕೆ., ಡಾ.ರಾಜೇಶ ಕಡೇಚೂರ, ಕೋಮಲೇಶ್ವರಿ ಅರುಣಕುಮಾರ, ಜಾದುಗಾರ ಕುದ್ರೋಳಿ ಗಣೇಶ ಇದ್ದರು. ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಅಧಿಕಾರಿ ಸದಾನಂದ ಪೆರ್ಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>