ಈ ರೈಲನ್ನು 10 ದಿನಗಳವರೆಗೆ ರದ್ದುಗೊಳಿಸುವುದರಿಂದ ಇಲಾಖೆಗೆ ಹಾಗೂ ಪ್ರಯಾಣಿಕರು ಸಾಕಷ್ಟು ಆರ್ಥಿಕ ನಷ್ಟ ಆಗಲಿದೆ ಎಂಬ ಅಂಶವನ್ನು ಮಧ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಶೈಲೇಶ್ ಗುಪ್ತಾ ಅವರಿಗೆ ಸೊಲ್ಲಾಪುರದ ಅವರ ಕಚೇರಿಯಲ್ಲಿ ಗುರುವಾರ ಭೇಟಿಯಾಗಿ ಮನವರಿಕೆ ಮಾಡಲಾಯಿತು. ಮನವಿಗೆ ತಕ್ಷಣವೇ ಸ್ಪಂದಿಸಿದ ಗುಪ್ತಾ ಅವರು ಈ ಸಂಬಂಧ ಶೀಘ್ರವೇ ಪರಿಷ್ಕೃತ ಆದೇಶ ಹೊರಡಿಸಿ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದರು ಎಂದರು.