ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಲ್ಲಿಯವರೆಗೂ ನಮ್ಮ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ನಮ್ಮ ಸಮಾಜದವರೇ ಆದ ಎಂ.ಡಿ.ಲಕ್ಷ್ಮಿನಾರಾಯಣ ಅವರು ಕೈಮಗ್ಗ ನಿಗಮದ ಅಧ್ಯಕ್ಷರಾದ ಸಂದರ್ಭದಲ್ಲಿ ಕೆಲ ಸುಧಾರಣೆಗಳಾದವು. ಆ ನಂತರ ಪ್ರಾತಿನಿಧ್ಯ ಸಿಕ್ಕಿಲ್ಲ. ದಿ.ಚಂದ್ರಶೇಖರ ಪಾಟೀಲ ರೇವೂರ ಅವರಿಗೆ ಆಪ್ತರಾದ, ಹಲವು ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿರುವ ಸಮಾಜದ ಮುಖಂಡ, ಯುವ ವಕೀಲ ವಿನೋದಕುಮಾರ ಜೆನೇವರಿ ಅವರನ್ನು ವಿಧಾನಪರಿಷತ್ಗೆ ನಾಮನಿರ್ದೇಶನ ಮಾಡಬೇಕು. ಆ ಮೂಲಕ ಹಟಗಾರ ಸಮಾಜದವರು ನಂಬಿಕೊಂಡಿರುವ ನೇಕಾರ ವೃತ್ತಿಯ ಸಮಸ್ಯೆಗಳನ್ನು ಪರಿಹರಿಸಲು ಅನುವು ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.