ಮಂಗಳವಾರ ವಿಮಾನದ ಮೂಲಕ ನಗರಕ್ಕೆ ಆಮಿಸುವ ಅವರು, ಬೆಳಿಗ್ಗೆ 11 ಗಂಟೆಗೆ ಚಿಂಚೋಳಿಗೆ ತೆರಳಿ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5ಕ್ಕೆ ಮರಳಿ ನಗರಕ್ಕೆ ಬರುವ ಅವರು, ರಾಜ್ಯಮಟ್ಟದ ಪತ್ರಕರ್ತರ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡುವರು.ಜ. 5ರಂದು ಸೇಡಂ ಪಟ್ಟಣಕ್ಕೆ ತೆರಳಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು.