ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುವಾರ ಸದನದಲ್ಲಿ ಸಚಿವರೊಬ್ಬರ ಅಕ್ರಮ ಬಯಲು: ಎಚ್‌ಡಿ ಕುಮಾರಸ್ವಾಮಿ

Last Updated 21 ಸೆಪ್ಟೆಂಬರ್ 2022, 8:04 IST
ಅಕ್ಷರ ಗಾತ್ರ

ಕಲಬುರಗಿ: ‘ರಾಜ್ಯ ಸರ್ಕಾರದ ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದನ್ನು ನಾಳೆ ದಾಖಲೆಗಳ ಸಮೇತ ಅಕ್ರಮ ಬಯಲಿಗೆ ಎಳೆಯುತ್ತೇನೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ‘ಅಕ್ರಮ ಎಸಗಿದ್ದ ದಾಖಲೆಗಳನ್ನು ಸದನದಲ್ಲಿಯೇ ಬಿಡುಗಡೆ ಮಾಡುತ್ತೇನೆ. ನಾಳೆಯವರೆಗೂ ಕಾಯಿರಿ. ಯಾವ ಸಚಿವರು, ಅವರ ಹೆಸರು ಏನು ಎಂಬುವುದು ಎಲ್ಲವೂ ನಾಳೆ ಸದನದಲ್ಲಿ ಬಹಿರಂಗವಾಗಲಿದೆ’ ಎಂದರು.

‘ನಾನು ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುವುದಿಲ್ಲ. ಹಿಟ್ ಆ್ಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಏಕವಚನದಲ್ಲಿ ಮಾತನಾಡಿದ ಆ ಸಚಿವರಿಗೆ ಇದು ಸಣ್ಣ ನಿದರ್ಶನ ಮಾತ್ರ. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ’ ಎಂದು ಹೇಳಿದರು.

ಜೆಡಿಎಸ್ ರಾಜ್ಯಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT