<p><strong>ಕಲಬುರಗಿ:</strong> ನಮಸ್ವಿ ಮಕ್ಕಳ ಕ್ಲಿನಿಕ್, ವಾಸ್ಕುಲರ್ ಕ್ಲಿನಿಕ್, ಮೋಲಾರ ಡೆಂಟಲ್ ಕ್ಲಿನಿಕ್, ಯುನಿಕೇರ್ ಡೈಗ್ನೋಸ್ಟಿಕ್ ಹಾಗೂ ಜಯನಗರ ಶಿವಮಂದಿರದ ಅಭಿವೃದ್ಧಿ ಟ್ರಸ್ಟ್ ಸಹಯೋಗದಲ್ಲಿ ಜಯನಗರ ಬಡಾವಣೆಯ ಶಿವಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುವಾರ ಉಚಿತ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು.</p>.<p>ಶಿಬಿರ ಉದ್ಘಾಟಿಸಿದ ಹಿರಿಯ ವೈದ್ಯ ಡಾ.ಎಸ್.ಎಸ್.ಗುಬ್ಬಿ, ‘ಮನುಷ್ಯ ತನ್ನ ಆರೋಗ್ಯ ಕಾಪಾಡಿಕೊಳ್ಳಬೇಕಾರೆ ಉತ್ತಮ ಆಹಾರ ಕ್ರಮದ ಕಡೆ ಗಮನ ಹರಿಸಬೇಕು. ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು‘ ಎಂದರು.</p>.<p>ನರರೋಗ ತಜ್ಞ ಡಾ.ಅನಿಲ್ ಪಾಟೀಲ, ಜಯನಗರ ಶಿವಮಂದಿರದ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೀರಪ್ಪ ಹುಡಗಿ, ವಿರೇಶ ದಂಡೋತಿ ವೇದಿಕೆ ಮೇಲೆ ಇದ್ದರು.</p>.<p>ಸಾಮಾನ್ಯ ಆರೋಗ್ಯ ತಪಾಸಣೆ ಜೊತೆಗೆ ಆಯುರ್ವೇದ ಹಾಗೂ ಹೋಮಿಯೋಪತಿ ಚಿಕಿತ್ಸೆಯೂ ಶಿಬಿರದಲ್ಲಿ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜನರು ತಪಾಸಣೆ ಮಾಡಿಸಿಕೊಂಡರು.</p>.<p>ಶಿಬಿರದಲ್ಲಿ ಪರಿಣಿತ ವೈದ್ಯರಾದ ಡಾ.ಶ್ರೀವಿಶಾಲ ವಿ. ಹುಡಗಿ, ಡಾ.ಸಂಧ್ಯಾ ವಿ.ಹುಡಗಿ, ಡಾ.ಪ್ರಶಾಂತ ವಿ.ಹುಡಗಿ, ಡಾ.ಲಕ್ಷ್ಮೀಶ್ರೀ ಪಿ.ಹುಡಗಿ, ಡಾ.ವಿನೋದ ವಿ.ಹುಡಗಿ ಹಾಗೂ ಡಾ.ಪ್ರಿಯಾಂಕಾ ವಿ.ಹುಡಗಿ ಅವರು ವಿವಿಧ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.ಆಹಾರ ಪದ್ಧತಿ, ನಿತ್ಯ ಜೀವನ ಶೈಲಿಯ ಬಗ್ಗೆಯೂ ತಿಳಿಸಿಕೊಡಲಾಯಿತು.</p>.<p>ಟ್ರಸ್ಟ್ ಪದಾಧಿಕಾರಿಗಳಾದ ಬಸವರಾಜ ಮಾಗಿ, ಸಿದ್ಧಲಿಂಗ ಗುಬ್ಬಿ, ಶಿವಕುಮಾರ ಪಾಟೀಲ, ಬಂಡಪ್ಪ ಕೇಸೂರ, ಮನೋಹರ ಬಡಶೇಷಿ, ಎಂ.ಡಿ.ಮಠಪತಿ, ಮಲ್ಲಯ್ಯ ಸ್ವಾಮಿ ಬೀದಿಮನಿ, ಮಹಿಳಾ ಸದಸ್ಯೆಯರಾದ ಸುಷ್ಮಾ ಮಾಗಿ, ಅನಿತಾ ನವಣಿ, ಸುರೇಖಾ ಬಾಲಕೊಂದೆ ಸೇರಿದಂತೆ ಹಲವರು ಶಿಬಿರದಲ್ಲಿ ಪಾಲ್ಗೊಂಡಿದ್ದರು.</p>.<p>ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಮಸ್ವಿ ಮಕ್ಕಳ ಕ್ಲಿನಿಕ್, ವಾಸ್ಕುಲರ್ ಕ್ಲಿನಿಕ್, ಮೋಲಾರ ಡೆಂಟಲ್ ಕ್ಲಿನಿಕ್, ಯುನಿಕೇರ್ ಡೈಗ್ನೋಸ್ಟಿಕ್ ಹಾಗೂ ಜಯನಗರ ಶಿವಮಂದಿರದ ಅಭಿವೃದ್ಧಿ ಟ್ರಸ್ಟ್ ಸಹಯೋಗದಲ್ಲಿ ಜಯನಗರ ಬಡಾವಣೆಯ ಶಿವಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುವಾರ ಉಚಿತ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು.</p>.<p>ಶಿಬಿರ ಉದ್ಘಾಟಿಸಿದ ಹಿರಿಯ ವೈದ್ಯ ಡಾ.ಎಸ್.ಎಸ್.ಗುಬ್ಬಿ, ‘ಮನುಷ್ಯ ತನ್ನ ಆರೋಗ್ಯ ಕಾಪಾಡಿಕೊಳ್ಳಬೇಕಾರೆ ಉತ್ತಮ ಆಹಾರ ಕ್ರಮದ ಕಡೆ ಗಮನ ಹರಿಸಬೇಕು. ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು‘ ಎಂದರು.</p>.<p>ನರರೋಗ ತಜ್ಞ ಡಾ.ಅನಿಲ್ ಪಾಟೀಲ, ಜಯನಗರ ಶಿವಮಂದಿರದ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೀರಪ್ಪ ಹುಡಗಿ, ವಿರೇಶ ದಂಡೋತಿ ವೇದಿಕೆ ಮೇಲೆ ಇದ್ದರು.</p>.<p>ಸಾಮಾನ್ಯ ಆರೋಗ್ಯ ತಪಾಸಣೆ ಜೊತೆಗೆ ಆಯುರ್ವೇದ ಹಾಗೂ ಹೋಮಿಯೋಪತಿ ಚಿಕಿತ್ಸೆಯೂ ಶಿಬಿರದಲ್ಲಿ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜನರು ತಪಾಸಣೆ ಮಾಡಿಸಿಕೊಂಡರು.</p>.<p>ಶಿಬಿರದಲ್ಲಿ ಪರಿಣಿತ ವೈದ್ಯರಾದ ಡಾ.ಶ್ರೀವಿಶಾಲ ವಿ. ಹುಡಗಿ, ಡಾ.ಸಂಧ್ಯಾ ವಿ.ಹುಡಗಿ, ಡಾ.ಪ್ರಶಾಂತ ವಿ.ಹುಡಗಿ, ಡಾ.ಲಕ್ಷ್ಮೀಶ್ರೀ ಪಿ.ಹುಡಗಿ, ಡಾ.ವಿನೋದ ವಿ.ಹುಡಗಿ ಹಾಗೂ ಡಾ.ಪ್ರಿಯಾಂಕಾ ವಿ.ಹುಡಗಿ ಅವರು ವಿವಿಧ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.ಆಹಾರ ಪದ್ಧತಿ, ನಿತ್ಯ ಜೀವನ ಶೈಲಿಯ ಬಗ್ಗೆಯೂ ತಿಳಿಸಿಕೊಡಲಾಯಿತು.</p>.<p>ಟ್ರಸ್ಟ್ ಪದಾಧಿಕಾರಿಗಳಾದ ಬಸವರಾಜ ಮಾಗಿ, ಸಿದ್ಧಲಿಂಗ ಗುಬ್ಬಿ, ಶಿವಕುಮಾರ ಪಾಟೀಲ, ಬಂಡಪ್ಪ ಕೇಸೂರ, ಮನೋಹರ ಬಡಶೇಷಿ, ಎಂ.ಡಿ.ಮಠಪತಿ, ಮಲ್ಲಯ್ಯ ಸ್ವಾಮಿ ಬೀದಿಮನಿ, ಮಹಿಳಾ ಸದಸ್ಯೆಯರಾದ ಸುಷ್ಮಾ ಮಾಗಿ, ಅನಿತಾ ನವಣಿ, ಸುರೇಖಾ ಬಾಲಕೊಂದೆ ಸೇರಿದಂತೆ ಹಲವರು ಶಿಬಿರದಲ್ಲಿ ಪಾಲ್ಗೊಂಡಿದ್ದರು.</p>.<p>ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>