ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಮಾತನಾಡಿ, ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ತರಬೇಕು. ಅಂಗವಿಕಲರಿಗೆ ಉಪಾಹಾರ, ಊಟದ ವ್ಯವಸ್ಥೆಯೂ ಇರಲಿದೆ. ಆಸಕ್ತರು ದೂರವಾಣಿ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಡಾ.ಸದಾನಂದ ಬೂದಿ (9008336099), ಸಿದ್ದಪ್ಪ ತಳ್ಳಳ್ಳಿ (9448104581) ಅವರನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.