ಗ್ರಾಮದ ಮೂಲಕ ಹಾದು ಹೋಗುವ ಹಳ್ಳ ಭೀಮಾನದಿಗೆ ಸೇರುತ್ತದೆ. ಹಳ್ಳದ ನೀರು ಸರಾಗವಾಗಿ ಹರಿದು ಹೋಗಲು ಇರುವ ದಾರಿಯಲ್ಲಿ ಕಲ್ಲುಗಣಿಗಳ ತ್ಯಾಜ್ಯ ಬಿದ್ದಿದೆ. ಹಳ್ಳದ ತುಂಬಾ ಜಾಲಿಮರಗಳು ಬೆಳೆದು ನಿಂತಿದ್ದು, ನೀರಿನ ಸರಾಗ ಹರಿಯುವಿಕೆಗೆ ಭಾರೀ ತೊಡಕಾಗಿವೆ. ಇದರಿಂದಾಗಿ ಮಳೆನೀರು ಗ್ರಾಮಕ್ಕೆ ನುಗ್ಗುತ್ತಿದೆ. ಜತೆಗೆ ನೀರು ಫಲವತ್ತಾದ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಗೆ ಕಾರಣವಾಗುತ್ತಿದೆ ಎಂದು ದೂರುತ್ತಾರೆ ಗ್ರಾಮಸ್ಥರು.